ಜನತಾ ಲಾಕ್‍ಡೌನ್ – ಸ್ವಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರ ಸಾವು

Public TV
1 Min Read

ಬಳ್ಳಾರಿ: ಜನತಾ ಲಾಕ್‍ಡೌನ್ ಹಿನ್ನೆಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಅಪಘಾತ ಸಂಭವಿಸಿದೆ.

ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದ ಭೀಮರಾವ್ ಬೆಳ್ಳೂರು (52), ಅವರ ಪುತ್ರ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬಸವರಾಜ್ (30), ಟೆಕ್ಕಿ ಸುನಿಲ್ ಪಾಟೀಲ (30), ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಕೊರಡಂಪಳ್ಳಿ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಿನ ಜಾವ ಸುಮಾರು 1.45ಕ್ಕೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಮೃತರು ಚಿಂಚೋಳಿ ತಾಲೂಕಿನ ಚಿಮ್ಮಾ ಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *