ಜಮೀನಿಗಾಗಿ ಹೊಡೆದಾಡ್ಕೊಂಡು ಆಸ್ಪತ್ರೆಗೆ ದಾಖಲಾದ ಅನ್ನದಾತರು

Public TV
1 Min Read

ಮೈಸೂರು: ಜಮೀನು ವಿಚಾರದಲ್ಲಿ ರೈತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಂಜನಗೂಡು ತಾಲೂಕು ಇಮ್ಮಾವು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಂದ್ರಶೇಖರ್ ಮತ್ತು ಬೆಂಬಲಿಗರು ಹಾಗೂ ರಘು ಬೆಂಬಲಿಗರ ನಡುವೆ ಹೊಡೆದಾಟ ನಡೆದಿದೆ.

ರಘು ಹೆಸರಿನಲ್ಲಿದ್ದ ಅರ್ಧ ಎಕರೆ ಜಮೀನನ್ನು ಚಂದ್ರಶೇಖರ್ ಉಳುಮೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಜಮೀನು ಬಿಡಿಸಿಕೊಳ್ಳಲು ರಘು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ರಘು ಪರ ತೀರ್ಪು ನೀಡಿತ್ತು. ಆದರೆ ತೆರವುಗೊಳಿಸುವ ಆದೇಶ ಇನ್ನೂ ನೀಡಿರಲಿಲ್ಲ.

ಇತ್ತ ತೀರ್ಪಿನ ಅನ್ವಯದಂತೆ ರಘು ಜಮೀನು ತೆರುವುಗೊಳಿಸುವಂತೆ ಒತ್ತಡ ಹೇರಿದ್ದ. ಹೀಗಾಗಿ ಕೆಲವು ರೈತರನ್ನ ಕರೆದುಕೊಂಡು ಹೋಗಿ ಜಮೀನು ಬಿಟ್ಟುಕೊಡುವಂತೆ ತಾಕೀತು ಮಾಡಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ತಾರಕಕ್ಕೆ ಹೋಗಿ ರೈತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *