ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – ಭದ್ರತಾ ಪಡೆಗಳ ಗುಂಡಿಗೆ ನಾಲ್ವರು ಬಲಿ

Public TV
1 Min Read

ಶ್ರೀನಗರ: ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿರುವ ಘಟನೆ ಸೋಮವಾರ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

ಉಗ್ರರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಭದ್ರತಾ ಪಡೆಗಳು ಮಧ್ಯರಾತ್ರಿ ಜಿಲ್ಲೆಯ ಮಣುಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ವೇಳೆ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಆರಂಭಿಸಿದರು. ಬಳಿಕ ಒಂದೆರಡು ಗಂಟೆಗಳ ಕಾಲ ಭಯೋತ್ಪಾದಕರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಭಯೋತ್ಪಾದಕರಿಗೆ ಶರಣಾಗುವಂತೆ ಭದ್ರತಾ ಪಡೆ ಹೇಳಿದಾಗ ಟೆರರಿಸ್ಟ್ ನಿರಾಕರಿಸಿದ್ದಾರೆ. ಹೀಗಾಗಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *