ಜಾರಕಿಹೊಳಿ ಸುದ್ದಿಗೋಷ್ಠಿ ಬೆನ್ನಲ್ಲೇ ಡಿಕೆಶಿ, ಹೆಬ್ಬಾಳ್ಕರ್ ಗುಸು-ಗುಸು ಚರ್ಚೆ

Public TV
1 Min Read

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಹೌದು. ವಿಧಾನಸಭೆಯ ಮೊಗಸಾಲೆಯ ವಿರೋಧ ಪಕ್ಷದ ನಾಯಕರ ಕೊಠಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಸುಮಾರು 10 ನಿಮಿಷಗಳ ಕಾಲ ಇಬ್ಬರ ಮಧ್ಯೆ ಗುಸು ಗುಸು, ಪಿಸು ಪಿಸು ನಡೆದಿದೆ. ಈ ಮೂಲಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಬೆನ್ನಲ್ಲೇ ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ಆಲರ್ಟ್ ಆದ್ರಾ ಎಂಬ ಪ್ರಶ್ನೆ ಎದ್ದಿದೆ.

ಕಲಾಪ ನಡೆಯುತ್ತಿದ್ದಾಗ ಹೊರಗೆ ಹೋಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಶ್ನೋತ್ತರ ಕಲಾಪ ಸಂದರ್ಭ ಗೈರಾಗಿದ್ದರು. ಇದೀಗ ಇಬ್ಬರು ನಾಯಕರ ನಡುವೆ ನಡೆದ ಮಾತುಕತೆ ಚರ್ಚೆಗೆ ಗ್ರಾಸವಾಗಿದೆ. ಇತ್ತ ಇಂದು ಸಂಜೆ 5 ಗಂಟೆಗೆ ಡಿಕೆಶಿ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಯಶವಂತಪುರ ಠಾಣೆಯ ಹತ್ತಿರದ ಅಪಾರ್ಟ್‍ಮೆಂಟ್ ಮತ್ತು ಹುಳಿಮಾವಿನಲ್ಲಿ ಕುಳಿತು ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ರಮೇಶ್ ಜಾರಕಿಹೊಳಿ ಗಂಭೀರ ಆರೋಪಿಸಿದ್ದರು

Share This Article
Leave a Comment

Leave a Reply

Your email address will not be published. Required fields are marked *