ಜೆಡಿಎಸ್ ಹಿರಿಯ ಶಾಸಕ ನಾಗನಗೌಡ ಕಂದಕೂರ, ಪುತ್ರನಿಗೆ ಕೊರೊನಾ

Public TV
1 Min Read

ಯಾದಗಿರಿ: ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಹಿರಿಯ ಶಾಸಕ ನಾಗನಗೌಡ ಕಂದಕೂರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರ ಕಿರಿಯ ಪುತ್ರ ಶರಣಗೌಡ ಕಂದಕೂರ ಫೇಸ್‍ಬುಕ್ ಮೂಲಕ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕರಾದ ನಾಗನಗೌಡ ಕಂದಕೂರ ಮತ್ತು ಅವರ ಹಿರಿಯ ಪುತ್ರ ಮಲ್ಲಿಕಾರ್ಜುನ ರೆಡ್ಡಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಶರಣಗೌಡ ಕಂದಕೂರ ಫೇಸ್‍ಬುಕ್ ಮೂಲಕ ತಮ್ಮ ತಂದೆ ಹಾಗೂ ಸಹೋದರನಿಗೆ ಸೋಂಕು ತಗುಲಿದ ವಿಷಯವನ್ನು ತಿಳಿಸಿದ್ದಾರೆ.

“ನನ್ನ ತಂದೆ ನಾಗನಗೌಡ ಕಂದಕೂರ ಹಾಗೂ ಸಹೋದರ ಮಲ್ಲಿಕಾರ್ಜುನ ರೆಡ್ಡಿ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಶಾಸಕರ ಸಂಪರ್ಕಕ್ಕೆ ಬಂದ ಎಲ್ಲರೂ ಹೋಂ ಕ್ವಾರಂಟೈನ್‍ಗೆ ಒಳಗಾಗಬೇಕು. ಜೊತೆಗೆ ಕೋವಿಡ್ ಪರೀಕ್ಷೆ ಮಾಡಿಸಬೇಕು” ಎಂದು ಮನವಿ ಮಾಡಿಕೊಂಡಿದ್ದಾರೆ.

ಶೀಘ್ರದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖರಾಗಿ ಜನ ಸೇವೆಗೆ ಬರಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಪ್ರಕರಣದಲ್ಲಿ ಜೆಡಿಎಸ್ ಯುವ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಸದ್ದು ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *