ಟಿಪ್ಪು ಕಾಲದಲ್ಲಿದ್ದ ಮತಾಂತರ, ದೌರ್ಜನ್ಯವನ್ನು ಬಿಜೆಪಿ ಮರೆಯಲ್ಲ: ಅಶೋಕ್

Public TV
1 Min Read

– ವಿಶ್ವನಾಥ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ

ಯಾದಗಿರಿ: ಟಿಪ್ಪುವಿನ ಕಾಲದಲ್ಲಿದ್ದ ಮತಾಂತರ ದೌರ್ಜನ್ಯ, ಕಗ್ಗೊಲೆ ಜೊತೆಗೆ ಕೊಡಗಿನಲ್ಲಿ ಮತಾಂತರ ಮಾಡಿದ್ದು ಇನ್ನೂ ನಮ್ಮ ಕಣ್ಮುಂದೆ ಇದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಇದೇ ವೇಳೆ ಟಿಪ್ಪು ಬಗ್ಗೆ ಹೆಚ್.ವಿಶ್ವನಾಥ್ ಹೇಳಿಕೆ ವಿಚಾರವಾಗಿ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಟಿಪ್ಪುವಿಗೆ ಯಾವಾಗಲೂ ನಮ್ಮ ವಿರೋಧವಿದೆ. ನಮ್ಮ ನಿಲುವಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ಪಕ್ಷ ಹಿಂದೆ ಏನ್ ಹೇಳಿದೆ ಅದಕ್ಕೆ ಈಗಲೂ ಬದ್ಧವಾಗಿದೆ. ವಿಶ್ವನಾಥ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದರು.

ಜೊತೆಗೆ ಸಿಎಂ ಪುತ್ರ ವಿಜಯೇಂದ್ರ ಬಗ್ಗೆ ಕಾಂಗ್ರೆಸ್ ನಾಯಕರ ಆರೋಪ ವಿಚಾರವಾಗಿ ಮಾತನಾಡಿದ ಅವರು, ಆ ರೀತಿ ಏನೂ ನಡೆದಿಲ್ಲ. ಸುಮ್ಮನೆ ಮನಸ್ಸಿಗೆ ಬಂದ ಹಾಗೆ ಹೇಳಿಕೆ ಕೊಡೋದು ಸರಿಯಲ್ಲ. ಸಾಕ್ಷ್ಯಾಧಾರ ಇಲ್ಲದೆ ಮಾತಾಡೋದು ತಪ್ಪು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *