ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ಜೆಡಿಎಸ್‍ನಿಂದ ಪೊಲೀಸ್ ಆಯುಕ್ತರಿಗೆ ದೂರು

Public TV
1 Min Read

ಬೆಂಗಳೂರು: ದರ್ಶನ್, ಇಂದ್ರಜಿತ್ ಲಂಕೇಶ್ ಆರೋಪ ಪ್ರತ್ಯಾರೋಪ ಸಮಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ನಿಂದಿಸಿದ್ದಕ್ಕೆ ‘ಟ್ರೋಲ್ ಮಗ’ ಪೇಜ್ ಅಡ್ಮಿನ್ ವಿರುದ್ಧ ಜೆಡಿಎಸ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ವಿರುದ್ಧ ಆರಂಭವಾದ ಲೋನ್ ಲಡಾಯಿ ತಿಕ್ಕಾಟ ನಂತರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಡೆ ತಿರುಗಿತ್ತು.

ಈ ಪ್ರಕರಣದಲ್ಲಿ ಹೆಚ್‍ಡಿಕೆ ಕೈವಾಡವಿದೆ ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೆಚ್‍ಡಿಕೆ ಇರುವ ಫೋಟೋ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿತ್ತು. ಇದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕೆಂಗಣ್ಣಿಗೆ ಗುರಿಯಾಗಿತ್ತು.

ಫೋಟೋ ವೈರಲ್ ಬಗ್ಗೆ ಸ್ಪಷ್ಟನೆ ಕೊಡುವ ಮೂಲಕ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು. ಹೀಗಿದ್ದರೂ ಇಂದ್ರಜಿತ್ ಲಂಕೇಶ್ ಹಾಗೂ ಕುಮಾರಸ್ವಾಮಿಯ ಭಾವಚಿತ್ರಗಳನ್ನ ಬಳಸಿಕೊಂಡು ಟ್ರೋಲ್ ಮಾಡಲಾಗುತ್ತಿದೆ. ಹೀಗಾಗಿ ಈಗ ಫೋಟೋವನ್ನು ವೈರಲ್ ಮಾಡಿ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದ್ದಾರೆ ಎಂದು ದೂರು ಜೆಡಿಎಸ್ ಕಾನೂನು ಘಟಕದ ಕಾರ್ಯದರ್ಶಿ ಪ್ರದೀಪ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ : ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು

ದೂರಿನಲ್ಲಿ ‘ಟ್ರೋಲ್ ಮಗ’ಪೇಜ್ ಅಡ್ಮಿನ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಇಂದ್ರಜಿತ್ ಲಂಕೇಶ್ ಇರುವ ಫೋಟೋವನ್ನು ವೈರಲ್ ಮಾಡಲಾಗುತ್ತಿದೆ. ಸೂತ್ರಧಾರಿ ಮತ್ತು ಪಾತ್ರಧಾರಿ ಎಂಬ ಪದದ ಜೊತೆಗೆ ಅವಾಚ್ಯ ಪದ ಬಳಕೆ ಆರೋಪ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಮಾಜಿ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಟ್ರೋಲ್ ಪೇಜ್ ಆಡ್ಮಿನ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *