ಟ್ರ್ಯಾಕ್ಟರ್ ಗಳ ನಡುವೆ ಡಿಕ್ಕಿ – ಕಬ್ಬು ಕಟಾವಿಗೆ ಹೊರಟಿದ್ದ 16 ಜನರಿಗೆ ಗಾಯ

Public TV
1 Min Read

ಹಾವೇರಿ: ಚಲಿಸುತ್ತಿದ್ದ ಟ್ರ್ಯಾಕ್ಟರ್‍ ಗೆ ಹಿಂಬಂದಿಯಿಂದ ಮತ್ತೊಂದು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಬ್ಬು ಕಟಾವಿಗೆ ಹೊರಟಿದ್ದ 16 ಜನ ಸಣ್ಣಪುಟ್ಟ ಗಾಯಗೊಂಡು ಪಾರಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕ ಅಣಜಿ ತಾಂಡಾದ ಬಳಿ ನಡೆದಿದೆ.

ಕಬ್ಬು ಕಟಾವು ಮಾಡಲು ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ, ಭತ್ತದ ಹುಲ್ಲು ತುಂಬಿಕೊಂಡು ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಬ್ಬು ಕಾಟಾವಿಗೆ ಹೋಗುತ್ತಿದ್ದ 16 ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಮೂಲತಃ ಇವರೆಲ್ಲ ಕೊಪ್ಪಳ ಜಿಲ್ಲೆಯ ಕೂಲಿ ಕಾರ್ಮಿಕರಾಗಿದ್ದರು. ಗಾಯಗೊಂಡ ಗಾಯಾಳುಗಳನ್ನು ಹಂಸಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕಾಗಿನೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *