ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ: ರೋಷನ್ ಬೇಗ್

Public TV
1 Min Read

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.

ಡಿಜೆ ಹಳ್ಳಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು, ಕಲಾಸಿಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು? ಹೊರಗಿನವರು ಯಾರ್ಯಾರೋ ಬಂದಿದ್ದರು. ದಿಡೀರ್ ಗಲಾಟೆ ಮಾಡಿದರು ಎಂದು ಸ್ಥಳಿಯರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರೂ ಇರಬಹುದು. ಅಂತಹವರನ್ನು ಬಿಡಿ. ಆದರೆ ತಪ್ಪು ಮಾಡಿದವರಿಗೆ ಮಾತ್ರ ಶಿಕ್ಷೆ ಆಗಲೇಬೇಕು. ಜಮೀರ್ ಅಹ್ಮದ್ ಬಗ್ಗೆ ನಾನು ಜಾಸ್ತಿ ಮಾತಾಡಲ್ಲ. ಜಮೀರ್ ಏನು ಅಂತ ನಾನು ಮಾತನಾಡಲಿ. ನಾನು ವಿದ್ಯಾರ್ಥಿ ಹೋರಾಟದಿಂದ ಬಂದ ಸೀನಿಯರ್ ಲೀಡರ್. ಯಡಿಯೂರಪ್ಪನವರು ಸಿಎಂ ಆದರೆ ಜಮೀರ್ ವಾಚ್‍ಮನ್ ಕೆಲಸ ಮಾಡ್ತೀನಿ ಅಂದಿದ್ದರು. ಮೊದಲು ಆ ಕೆಲಸ ಮಾಡಲಿ ಎಂದು ಹರಿಹಾಯ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *