ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವಾಹನ ಅಪಘಾತ- 8 ಮಂದಿ ಸ್ಥಳದಲ್ಲೇ ಸಾವು

Public TV
1 Min Read

ಚೆನ್ನೈ: ತೀರ್ಥಯಾತ್ರೆ ಮುಗಿಸಿಕೊಂಡು ಟೆಂಪೋನಲ್ಲಿ ಬರುತ್ತಿರುವ ವಾಹನ ಅಪಘಾತಕ್ಕೀಡಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.

ಮುಂಜಾನೆ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಶ್ರೀಶೈಲಂ ದೇವಸ್ಥಾನ ಮತ್ತು ಇತರ ದೇಗುಲಗಳಿಗೆ ಭೇಟಿ ಕೊಟ್ಟು ಭಕ್ತರು ತೀರ್ಥಯಾತ್ರೆಯ ನಂತರ ಮನೆಗೆ ಬರುತ್ತಿದ್ದಾಗ ತಮಿಳುನಾಡಿನಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಟ್ರಕ್‍ಗೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಟೆಂಪೋ ಡಿಕ್ಕಿ ಹೊಡೆದಿದೆ. ಟೆಂಪೋದಲ್ಲಿ ಒಟ್ಟು 15 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ವಾಹನದಲ್ಲಿದ್ದ 8 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ನೆಲ್ಲೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ವೇಳೆ ಟೆಂಪೋ ಚಾಲಕ ಸೇರಿದಂತೆ ಮುಂದಿನ ಆಸನಗಳಲ್ಲಿ ಕುಳಿತಿದ್ದ ಇತರ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇತರ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರಿದ್ದಾರೆ. ಟೆಂಪೋ ಚಾಲಕ ವಾಹನ ಚಲಾಯಿಸುತ್ತಾ ನಿದ್ದೆಗೆ ಜಾರಿರಬಹುದು ಎನ್ನಲಾಗುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *