ದಕ್ಷಿಣ ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕವನ್ನು ವಾಮದಪದವು ಸಮುದಾಯ ಬಂಟ್ವಾಳದ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಮಾಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ. ಈ ಘಟಕ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮಥ್ರ್ಯ ಹೊಂದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿಯೂ ಹಂತ ಹಂತವಾಗಿ ಆಕ್ಸಿಜನ್ ಘಟಕ ಸ್ಥಾಪನೆಯಾಗಲಿದೆ ಎಂದು ಹೇಳಿದರು.

ಬಂಟ್ವಾಳದಲ್ಲಿ ಕೊರೊನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಎ.ಸಿ.ಮದನ್ ಮೋಹನ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋಚನ ಜಿ.ಕೆ.ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ತಹಶಿಲ್ದಾರ್ ರಶ್ಮಿ. ಎಸ್. ಆರ್, ಡಾ.ಉಮೇಶ್ ಅಡ್ಯಾಂತಾಯ, ಇಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *