ದಕ್ಷಿಣ ಕನ್ನಡ, ಉಡುಪಿಯಲ್ಲಿ ರವಿವಾರ ರಂಜಾನ್ ಹಬ್ಬ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ.

ಮಂಗಳೂರಿನ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಮ್ಮ ಜಿಲ್ಲೆಯ ಜನತೆಗೆ ಭಾನುವಾರ ಆಚರಿಸುವಂತೆ ಹೇಳಿದ್ದಾರೆ. ಇಂದು ರಾತ್ರಿ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ.

ಸಾಂದರ್ಭಿಕ ಚಿತ್ರ

ಭಾನುವಾರವೇ ಈದುಲ್ ಫಿತ್ರ ಆಚರಿಸುವ ಸಾಧ್ಯತೆಗಳು ಹೆಚ್ಚಿದ್ದು, ಆದ್ರೆ ಸರ್ಕಾರ ಪ್ರತಿ ರವಿವಾರ ಸಂಪೂರ್ಣ ಲಾಕ್‍ಡೌನ್ ಅಂತ ಈಗಾಗಲೇ ಘೋಷಿಸಿದೆ. ಒಂದು ವೇಳೆ ಭಾನುವಾರ ಹಬ್ಬದ ಆಚರಣೆ ಅಂತಾದ್ರೆ ಉಳಿದ ಸಡಿಲಿಕೆಯನ್ನು ಜಿಲ್ಲೆಗೆ ನೀಡಬೇಕೆಂದು ನಗರದ ಬಂದರ್ ನ ಮಸೀದಿ ಝೀನತ್ ಬಕ್ಷ್ ಮತ್ತು ಈದ್ಗಾ ಮಸೀದಿಯ ವತಿಯಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಳಿಗೆ ಮನವಿ ಮಾಡಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *