ದೀಪ ಹಚ್ಚಿದೆವು, ಗಂಟೆ ಬಾರಿಸಿದೆವು, ಇನ್ನು ಸುಮ್ಮನಿರಲ್ಲ- ಡಿಕೆಶಿ ಕಿಡಿ

Public TV
1 Min Read

– ಬಡವರ ಹೆಣದ ಮೇಲೆ ಸರ್ಕಾರ ಹಣ ಹೊಡೆದಿದೆ

ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.

ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.

ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.

ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *