ದುರಂತದ ಬಳಿಕ ತಲಕಾವೇರಿಯಲ್ಲಿ ನಾಳೆ ಪೂಜೆ ಪ್ರಾರಂಭ

Public TV
1 Min Read

– ನಾಳೆ ಪೂಜೆಗೆ ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಡಿಕೇರಿ: ತಲಕಾವೇರಿಯಲ್ಲಿ ನಾಳೆಯಿಂದ ಪೂಜೆ ನೆರವೇರುವುದರಿಂದ ದೇವಾಲಯದಲ್ಲಿ ನಡೆದಿರುವ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಅನೀಸ್.ಕೆ.ಜಾಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಒಂದು ವಾರದ ಹಿಂದೆ ಸುರಿದ ಧಾರಾಕಾರ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟಸಾಲಿನ ಗಜರಾಜಗಿರಿ ಬೆಟ್ಟ ಕುಸಿದಿದ್ದರಿಂದ ಇಲ್ಲಿ ಪೂಜಿಸುತ್ತಿದ್ದ ಪ್ರಧಾನ ಅರ್ಚಕರ ಕುಟುಂಬವೇ ಕಣ್ಮರೆ ಆಗಿದೆ. ಹೀಗಾಗಿ ವಾರದಿಂದ ತಲಕಾವೇರಿಯಲ್ಲಿ ಪೂಜೆ, ಧಾರ್ಮಿಕ ಕಾರ್ಯಗಳು ನಡೆದಿರಲಿಲ್ಲ.

ನಾಳೆ ತಲಕಾವೇರಿಯಲ್ಲಿ ಪೂಜೆ ನೆರವೇರಿಸಲು ಸಿದ್ಧತೆ ಮಾಡಿಕೊಂಡಿರುವುದರಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಥಳಕ್ಕೆ ಭೇಟಿ ನೀಡಿದರು. ಇದೇ ವೇಳೆ ದೇವಾಲಯಕ್ಕೆ ಸಂಪರ್ಕ ಸಲ್ಪಿಸುವ ರಸ್ತೆ ಮೇಲೆಯೇ ಮಣ್ಣಿನ ರಾಶಿ ಹಾಗೂ ಕೆಸರು ಬಿದ್ದಿರುವುದನ್ನು ಕಂಡು, ನಾಳೆಯೊಳಗೆ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾಳೆಯಿಂದ ತಲಕಾವೇರಿಯಲ್ಲಿ ಮತ್ತೆ ಪೂಜಾ ಕೈಂಕರ್ಯ ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಇದೇ ಮೊದಲ ಬಾರಿ ಇಷ್ಟು ದಿನಗಳು ತಲಕಾವೇರಿಯಲ್ಲಿ ಪೂಜೆ ಸ್ಥಗಿತಗೊಂಡಿದ್ದವು.

Share This Article
Leave a Comment

Leave a Reply

Your email address will not be published. Required fields are marked *