ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಹಲವೆಡೆ ಇಂಟರ್‌ನೆಟ್‌ ಸೇವೆ ಬಂದ್‌

Public TV
1 Min Read

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಟ್ರ್ಯಾಕ್ಟರ್‌ ಪ್ರತಿಭಟನೆ ಈಗ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ದೆಹಲಿಯ ಕೆಲ ಭಾಗದಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇಂದು ಮಧ್ಯಾಹ್ನ ದೆಹಲಿ ತಲುಪಿದ ರೈತರು ವಿಶ್ವ ಪಾರಂಪರಿಕ ತಾಣವಾದ ಕೆಂಪುಕೋಟೆಗೆ ನುಗ್ಗಿ ಕಿಸಾನ್‌ ಧ್ವಜವನ್ನು ಹಾರಿಸಿದ್ದಾರೆ. ಇಷ್ಟೇ ಅಲ್ಲದೇ ಕೆಂಪುಕೋಟೆಯ ಗುಮ್ಮಟದ ಮೇಲೆ ರೈತರು ಸಿಖ್‌ ಧ್ವಜವನ್ನು ಹಾರಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಕೆಂಪುಕೋಟೆಗೆ ನುಗ್ಗಿದ ಪರಿಣಾಮ ಪೊಲೀಸರಿಗೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ಮಾಡಿ ಚದುರಿಸುವ ಕೆಲಸ ಮಾಡಿದ್ದಾರೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ದೆಹಲಿ ಕೆಲ ಭಾಗ ಮತ್ತು ಸಿಂಘು, ಗಾಜಿಯಾಬಾದ್‌, ಟಿಕ್ರಿ ಗಡಿ ಭಾಗದಲ್ಲಿ ಇಂದು ಮಧ್ಯರಾತ್ರಿಯವರೆಗೆ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *