ದೇವರ ಗರ್ಭಗುಡಿಯಲ್ಲೇ ಅರ್ಚಕ ಸಾವು

Public TV
0 Min Read

ಮಂಡ್ಯ: ದೇವಸ್ಥಾನದಲ್ಲಿ ದೇವರಿಗೆ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಅರ್ಚಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಂಗಲ ಗ್ರಾಮದ ಮಲ್ಲೇಶ್ವರಸ್ವಾಮಿ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಮೃತ ವ್ಯಕ್ತಿಯಾಗಿದ್ದಾರೆ. ಚಂದ್ರಶೇಖರ್ ಹಲವು ವರ್ಷಗಳಿಂದ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದ ವೇಳೆ ಮಲ್ಲೇಶ್ವರಸ್ವಾಮಿಗೆ ಪೂಜೆ ಮಾಡುತ್ತಿದ್ದ ವೇಳೆ, ಗರ್ಭಗುಡಿಯಲ್ಲೇ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *