ದೇವಸ್ಥಾನದ ಆವರಣದಲ್ಲೇ ನಾದಿನಿಯನ್ನ ಕೊಂದ ಬಾವ

Public TV
1 Min Read

– ತಲೆಗೆ ಕಬ್ಬಿಣದ ರಾಡ್‍ನಿಂದ ಹೊಡೆದು ಎಸ್ಕೇಪ್
– ದೇಗುಲದಿಂದ ಹಿಂದಿರುಗುತ್ತಿದ್ದಾಗ ಕೃತ್ಯ

ಭುವನೇಶ್ವರ: ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ನಾದಿನಿಯನ್ನು ದೇಗುಲದ ಆವರಣದಲ್ಲಿ ಬಾವ ಕೊಲೆ ಮಾಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹರಿದಪದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗ್ರಾಮದ ರಂಜಿ ನಹಾಕ್ (40) ಎಂದು ಗುರುತಿಸಲಾಗಿದೆ. ರಂಜಿ ಇಂದು ಮುಂಜಾನೆ ಸುಮಾರು 5 ಗಂಟೆಗೆ ದೇವಸ್ಥಾನಕ್ಕೆ ಹೋಗಿದ್ದರು. ದೇವಾಲಯದಿಂದ ಹಿಂದಿರುಗುತ್ತಿದ್ದಾಗ ಮಹಿಳೆಯ ಬಾವ ಮೋಚಿರಾಮ್ ಕಬ್ಬಿಣದ ರಾಡ್‍ನಿಂದ ರಂಜಿ ತಲೆಗೆ ಹೊಡೆದಿದ್ದಾನೆ.

ರಂಜಿ ತೀವ್ರವಾಗಿ ಗಾಯಗೊಂಡಿದ್ದು, ದೇವಸ್ಥಾನದ ಆವರಣದಲ್ಲೇ ಮೃತಪಟ್ಟಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯಕ್ಕೆ ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *