ದೇಶದ ಆಸ್ತಿ ಬಂಡವಾಳಶಾಹಿಗಳ ಕೈಗೆ ನೀಡುವ ಪ್ಲಾನ್- ರಾಹುಲ್ ಕಿಡಿ

Public TV
1 Min Read

ನವದೆಹಲಿ: ಇಂದು ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಸರ್ಕಾರ ಸಣ್ಣ ಮತ್ತು ಮಧ್ಯಮ ಉದ್ಯಮಗಳು, ರೈತರು ಹಾಗೂ ಕಾರ್ಮಿಕರಿಗೆ ಉದ್ಯೋಗ ನೀಡುತ್ತಾ ಕಾರ್ಯನಿರ್ವಹಿಸಬೇಕು. ಆರೋಗ್ಯ ಮತ್ತು ರಕ್ಷಣಾ ಕ್ಷೇತ್ರಕ್ಕೆ ಒತ್ತು ನೀಡಬೇಕು ಎಂದು ರಾಹುಲ್‌ ಗಾಂಧಿ ಇಂದು ಬೆಳಗ್ಗೆ ಟ್ವೀಟ್‌ ಮಾಡಿದ್ದರು

ಬಜೆಟ್‌ ಮಂಡನೆಯಾದ ಬಳಿಕ ಜನರ ಕೈಗೆ ಹಣವನ್ನು ನೀಡುವ ಬದಲು, ಮೋದಿ ಸರ್ಕಾರ ದೇಶದ ಆಸ್ತಿಗಳನ್ನು ತನ್ನ ಬಂಡವಾಳ ಶಾಹಿಗಳ ಕೈಗೆ ಹಸ್ತಾಂತರಿಸುವ ಯೋಜನೆ ರೂಪಿಸಿದೆ. ದೇಶದ ಆಸ್ತಿಗಳನ್ನು ಸರ್ಕಾರದ ಆಪ್ತ ಬಂಡವಾಳ ಶಾಹಿಗಳಿಗೆ ಹಸ್ತಾಂತರಿಸುವ ಪ್ಲಾನ್ ಇದು ಎಂದು ಟೀಕೆ ಮಾಡಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *