ದೇಶದ ಹಿತಕ್ಕಾಗಿ ರೈತ ವಿರೋಧಿ ಕಾನೂನುಗಳನ್ನ ಹಿಂಪಡೆಯರಿ: ರಾಹುಲ್ ಗಾಂಧಿ

Public TV
1 Min Read

ನವದೆಹಲಿ: ಗಣರಾಜ್ಯೋತ್ಸವ ದಿನವೇ ದೇಶದ ರಾಜಧಾನಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ, ರೈತ ವಿರೋಧಿ ಕಾನೂನುಗಳನ್ನ ಹಿಂಪಡೆಯಿರಿ ಎಂದು ಆಗ್ರಹಿಸಿದ್ದಾರೆ.

ಹಿಂಸೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಏನೇ ಹಾನಿ ಸಂಭವಿಸಿದರೂ ಅದು ದೇಶಕ್ಕಾದ ನಷ್ಟ. ಹಾಗಾಗಿ ದೇಶದ ಹಿತಕ್ಕಾಗಿ ಕೃಷಿ ವಿರೋಧಿ ಕಾನೂನುಗಳನ್ನ ಹಿಂಪಡೆಯಿರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ರೈತರು ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಗಡಿಯಲ್ಲಿದ್ದ ಧರಣಿ ನಿರತರು ಇಂದು ರಾಜಧಾನಿ ಪ್ರವೇಶಿಸಿದ್ದು, ಪ್ರತಿಭಟನೆ ಹಿಂಸೆ ರೂಪ ಪಡೆದುಕೊಂಡಿದೆ.

ಸೋಮವಾರ ತಮಿಳುನಾಡಿನಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ದೇಶದ ಪ್ರಧಾನ ಮಂತ್ರಿಗಳು ಮೂರು ಕೃಷಿ ಕಾಯ್ದೆಗಳ ಮೂಲಕ ರೈತರ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ನೀತಿಗಳಿಂದ ದೇಶದ ಕೃಷಿ ವಲಯ ನಾಶವಾಗಲಿದೆ. ಇಡೀ ಕೃಷಿ ವಲಯ ಕೆಲ ಕೋಟ್ಯಧಿಪತಿಗಳಲ್ಲಿಯೇ ಕೇಂದ್ರಿಕೃತವಾಗಲಿದೆ. ರೈತರು ತಮ್ಮ ಸುರಕ್ಷೆಗಾಗಿ ನ್ಯಾಯಾಲಯಕ್ಕೆ ಹೋಗುವಂತಿಲ್ಲ ಎಂದು ಒಂದು ಕಾನೂನು ಹೇಳುತ್ತೆ ಎಂದಿದ್ದರು.

Share This Article
Leave a Comment

Leave a Reply

Your email address will not be published. Required fields are marked *