ದೇಶವು ತನ್ನ ಯೋಗ್ಯ ಪುತ್ರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ- ಕೋವಿಂದ್, ರಾಜನಾಥ್ ಸಿಂಗ್ ಸಂತಾಪ

Public TV
2 Min Read

ನವದೆಹಲಿ: ದೇಶದ ಚತುರ ರಾಜಕಾರಿಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭಾರತ ರತ್ನ ಪ್ರಶಸ್ತಿ ಪಡೆದಿದ್ದ 84 ವರ್ಷದ ಪ್ರಣಬ್ ಮುಖರ್ಜಿ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಆಗಸ್ಟ್ 10 ರಿಂದ ಶ್ವಾಸಕೋಶ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಕೋಮಾಗೆ ಜಾರಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇಲ್ಲ ಎಂದು ಕೇಳಲು ಬೇಸರವಾಗುತ್ತಿದೆ. ಅವರ ನಿಧನ ಒಂದು ಯುಗದ ಹಾದುಹೋಗುವಿಕೆ. ಸಾರ್ವಜನಿಕ ಜೀವನದಲ್ಲಿ ಮಾತೃ ದೇವತೆ ಭಾರತಕ್ಕೆ ಸ್ಫೂರ್ತಿಯ ಮನೋಭಾವದಿಂದ ಸೇವೆ ಸಲ್ಲಿಸಿದ್ದರು. ದೇಶವು ತನ್ನ ಯೋಗ್ಯ ಪುತ್ರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ದೇಶದ ನಾಗರಿಕರಿಗೆ ಸಂತಾಪ ಸಂತಾಪ ಸೂಚಿಸುತ್ತಿದ್ದೇನೆ. ದೇಶದ ಪ್ರಥಮ ಪ್ರಜೆಯಾಗಿ ಅವರು ರಾಷ್ಟ್ರಪತಿ ಭವನವನ್ನು ಜನರ ಹತ್ತಿರ ತಂದು ಎಲ್ಲರೊಂದಿಗೆ ಸಂಪರ್ಕವನ್ನು ಹೊಂದಿದ್ದರು. ಸಾರ್ವಜನಿಕರ ಭೇಟಿಗಾಗಿ ಸದಾ ದ್ವಾರಗಳನ್ನು ತೆರೆದಿಟ್ಟಿದ್ದರು ಎಂದು ತಿಳಿಸಿದ್ದಾರೆ.

ಗೃಹ ಸಚಿವ ರಾಜ್‍ನಾಥ್ ಸಿಂಗ್ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಪ್ರಣಬ್ ಮುಖರ್ಜಿ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರನ್ನು ಸಮಾಜದ ಎಲ್ಲಾ ವರ್ಗಗಳ ಜನರು ವ್ಯಾಪಕವಾಗಿ ಗೌರವಿಸುತ್ತಿದ್ದರು. ಅವರ ನಿಧನದಿಂದ ವೈಯುಕ್ತಿಕವಾಗಿ ನಷ್ಟವಾಗಿದೆ. ಅವರು ಭಾರತ ಇತಿಹಾಸ, ರಾಜತಾಂತ್ರಿಕತೆ, ಸಾರ್ವಜನಿಕ ನೀತಿ ಮತ್ತು ರಕ್ಷಣೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು ಎಂದು ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *