ಧಗಧಗನೇ ಹೊತ್ತಿ ಉರಿಯಿತು ಬೆಡ್ ಹೊತ್ತು ತಂದ ಲಾರಿ

Public TV
1 Min Read

ಯಾದಗಿರಿ: ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಕ್ಕೆ ತಲುಪಬೇಕಾಗಿದ್ದ ಬೆಡ್ ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಯಾದಗಿರಿ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ.

ಲಾರಿ ಧಗಧಗನೇ ಹೊತ್ತಿ ಉರಿದಿದ್ದು, ವಿದ್ಯಾರ್ಥಿನಿಯರಿಗೆ ತಲುಪಬೇಕಾದ ಬೆಡ್ ಗಳು ಸುಟ್ಟು ಕರಕಲವಾಗಿವೆ. ಬೆಂಗಳೂರಿನಿಂದ ಬಂದಿರುವ ಬೆಡ್‍ಗಳನ್ನ ತುಂಬಿದ ಲಾರಿ ವಿದ್ಯುತ್ ತಂತಿ ಕಡಿದು ಬಿದ್ದಿರುವ ಪರಿಣಾಮ ಸುಮರು 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ತಲುಪಬೇಕಾಗಿದ್ದು, ಬೆಂಕಿಗೆ ಆಹುತಿಯಾಗಿವೆ. ಇದನ್ನು ಓದಿ:ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ- ಲಾಕ್‍ಡೌನ್ ಎಫೆಕ್ಟ್‌ಗೆ ಸಿಕ್ಕು ನಲುಗಿದ ಶುಂಠಿ, ಕಲ್ಲಂಗಡಿ

ಸಂಪೂರ್ಣ ಲಾರಿ ಜೊತೆ ಬೆಡ್‍ಗಳು ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಿಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದೆ.

ಇತ್ತೀಚೆಗಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದರು. ಇದನ್ನು ಓದಿ: ಕೆಐಎಎಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ – 6 ಮಂದಿಗೆ ಗಾಯ

Share This Article
Leave a Comment

Leave a Reply

Your email address will not be published. Required fields are marked *