ಧಾರವಾಡದಲ್ಲಿ ಧಾರಾಕಾರ ಮಳೆ- ಹಳ್ಳ ತುಂಬಿ ಹರಿಯುತ್ತಿರುವುದರಿಂದ ರಸ್ತೆ ಸಂಚಾರ ಬಂದ್

Public TV
1 Min Read

– ಬಹುತೇಕ ತುಂಬಿದ ಕೆರೆಗಳು

ಧಾರವಾಡ: ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಬಹುತೇಕ ಕೆರೆಗಳು ತುಂಬಿದ್ದು, ತುಪ್ರಿಹಳ್ಳ ಹಾಗೂ ಬೆಣ್ಣಿಹಳ್ಳ ಸಹ ತುಂಬಿ ಹಡಿಯುತ್ತಿರುವುದರಿಂದ ಹಲವು ರಸ್ತೆಗಳ ಸಂಚಾರ ಕಡಿತಗೊಂಡಿದೆ.

ಜಿಲ್ಲೆಯ ಹಾರೋಬೆಳವಡಿ ಬಳಿ ಇರುವ ತಾತ್ಕಾಲಿಕ ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಸೌದತ್ತಿ ರಸ್ತೆ ಕಡಿತಗೊಂಡಿದೆ. ಅಲ್ಲದೆ ಧಾರವಾಡ ತಾಲೂಕಿನ ಕಂಬಾರಗಣವಿ ಗ್ರಾಮಕ್ಕೆ ಹೋಗುವ ರಸ್ತೆ ಕೂಡ ಜಲಾವೃತಗೊಂಡಿದ್ದರಿಂದ ಗ್ರಾಮಸ್ಥರು ಗ್ರಾಮದಿಂದ ಹೊರಗೆ ಬರದಂತಾಗಿದೆ.

ಹೊಸೆಟ್ಟಿ ಗ್ರಾಮದ ಬೀದಿಗಳಿಗೆ ನೀರು ನುಗ್ಗಿದ್ದು, ಕೆರೆ ಭರ್ತಿಯಾಗಿದ್ದರಿಂದ ಅಪಾರ ಪ್ರಮಾಣದ ನೀರು ಗ್ರಾಮಕ್ಕೆ ನುಗ್ಗಿದೆ. ಕೆರೆಯ ಸಂಗ್ರಹ ಸಾಮರ್ಥ್ಯ ಮೀರಿ ನೀರು ಬರುತ್ತಿರುವ ಹಿನ್ನೆಲೆ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸಂಪೂರ್ಣ ಜಲಾವೃತವಾಗಿರುವುದರಿಂದ ಗ್ರಾಮಸ್ಥರು ಪರದಾಡುವಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *