ಧಾರವಾಡ ಜಿಲ್ಲೆಯಲ್ಲಿ ಮಳೆ – ಕೆರೆಯ ಕಟ್ಟೆ ಒಡೆದು ನೂರಾರು ಎಕರೆ ಜಮೀನು ಜಲಾವೃತ!

Public TV
1 Min Read

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಬಹುತೇಕ ಕೆರೆಗಳು ಭರ್ತಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಲಘಟಗಿ ತಾಲೂಕಿನ ಹಟಕಿನಾಳದ ಜಿಗಳಿ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆ ಭರ್ತಿಯಾಗಿ ಕಟ್ಟೆ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಕರೆಯಿಂದ ರೈತರ ಜಮೀನುಗಳಿಗೆ ನುಗ್ಗಿ ನೂರಾರು ಎಕರೆಯಲ್ಲಿ ಬೆಳೆದ ಬೆಳಗಳು ಸಂಪೂರ್ಣ ಜಲಾವೃತಗೊಂಡಿವೆ.

ಕೆರೆಯ ಸುತ್ತಮುತ್ತಲಿನ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ, ಸೋಯಾಬಿನ್, ಕಬ್ಬು, ಹತ್ತಿ, ಗೋವಿನಜೋಳ ಬೆಳೆಗಳು ನೀರಿನಲ್ಲಿ ಜಲಾವೃತವಾಗಿದ್ದು. ಇದರಿಂದ ಅನ್ನದಾತನ ಬದುಕು ದಿಕ್ಕು ತೋಚದಂತಾಗಿದೆ.

ಕೆರೆಯ ಕಟ್ಟೆ ಒಡೆದು ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗುತ್ತಿದ್ದರು. ರೈತರ ಬೆಳೆಗಳು ಜಲಾವೃತಗೊಂಡರು ಸ್ಥಳಕ್ಕೆ ಅಧಿಕಾರಿಗಳು ಮಾತ್ರ ಭೇಟಿ ನೀಡಿಲ್ಲ. ಹೀಗಾಗಿ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು. ಕೂಡಲೇ ಕೆರೆಯ ಕಟ್ಟೆ ರಿಪೇರಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *