ಧಾರವಾಡ, ಬಳ್ಳಾರಿಯಲ್ಲಿ ಕೊರೊನಾ ಸೆಂಚೂರಿ- ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

Public TV
1 Min Read

ಬೆಂಗಳೂರು: ಇಂದು ಸಹ ರಾಜ್ಯಕ್ಕೆ ಕೊರೊನಾ ಸುನಾಮಿ ಅಪ್ಪಳಿಸಿದ್ದು, ಒಂದೇ ದಿನ 3,176 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು 2 ಸಾವಿರದ ಗಡಿಗೆ ಬಂದ್ರೆ, ಧಾರವಾಡ ಮತ್ತು ಬಳ್ಳಾರಿಯಲ್ಲಿ ಕೊರೊನಾ ಮಹಾಮಾರಿ ಸೆಂಚೂರಿ ಬಾರಿಸಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 1,975, ಧಾರವಾಡ 139, ಬಳ್ಳಾರಿ 136, ಮೈಸೂರು 99, ವಿಜಯಪುರ 80, ದಕ್ಷಿಣ ಕನ್ನಡ 76, ಕಲಬುರಗಿ 67, ಉಡುಪಿ 52, ಯಾದಗಿರಇ 49, ಉತ್ತರ ಕನ್ನಡ 48, ಬೆಳಗಾವಿ 41, ಗದಗ 39, ಬೀದರ್ 35, ದಾವಣಗೆರೆ 35, ಬಾಗಲಕೋಟೆ 34, ಚಿಕ್ಕಬಳ್ಳಾಪುರ 32, ಮಂಡ್ಯ 31, ಶಿವಮೊಗ್ಗ 29, ರಾಯಚೂರು 26, ಹಾಸನ 25, ತುಮಕೂರು 24, ಕೊಡಗು 23, ಕೋಲಾರ 15, ಕೊಪ್ಪಳ 14, ಚಿಕ್ಕಮಗಳೂರು 13, ಚಿತ್ರದುರ್ಗ 12, ಬೆಂಗಳೂರು ಗ್ರಾಮಾಂತರ 10, ಚಾಮರಾಜನಗರ 8, ಹಾವೇರಿ 6 ಮತ್ತು ರಾಮನಗರ ಮೂರು ಪ್ರಕರಣ ದಾಖಲಾಗಿವೆ.

ಇಂದು ರಾಜ್ಯದಲ್ಲಿ 1076 ಮಂದಿಗೆ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 27,853 ಸಕ್ರಿಯ ಪ್ರಕರಣಗಳಿವೆ. ಇವತ್ತು ಒಟ್ಟು 87 ಜನರು ಕೊರೊನಾಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 928ಕ್ಕೆ ಏರಿಕೆಯಾಗಿದೆ. ಸದ್ಯ 597 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *