ನಟ ದುನಿಯಾ ವಿಜಯ್ ನೋಡಲು ಮುಗಿಬಿದ್ದ ಅಭಿಮಾನಿಗಳು!

Public TV
1 Min Read

ಚಾಮರಾಜನಗರ: ನಟ ದುನಿಯಾ ವಿಜಯ್ ನೋಡಲು ಕಾಲೇಜಿನ ವಿದ್ಯಾರ್ಥಿ ಸಮೂಹ ಹಾಗೂ ಅಭಿಮಾನಿಗಳು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣಕ್ಕೆ ಬೃಹತ್ ಆರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ಆಗಮಿಸಿದ ಚಿತ್ರ ನಟ ದುನಿಯಾ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ನೂಕು ನುಗ್ಗಲು ಉಂಟು ಮಾಡಿದರು. ಇದನ್ನೂ ಓದಿ: ಆಶ್ರಯ ನೀಡಿದ ಅಭಿಮಾನಿಯೊಂದಿಗೆ ಕಿರಿಕ್- ಮನೆ ಬಿಟ್ಟು ಬಂದ ನಟಿ ವಿಜಯಲಕ್ಷ್ಮಿ

ಕೊಳ್ಳೇಗಾಲಕ್ಕೆ ದುನಿಯಾ ವಿಜಯ್ ಭೇಟಿ ವೇಳೆ ಸಾಮಾಜಿಕ ಅಂತರ ಮರೆತ ಅಭಿಮಾನಿಗಳು ನಟನಿಗೆ ಜೈಕಾರ ಹಾಕುತ್ತಾ ಅವರೊಡನೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸ್ವತಃ ನಟ ವಿಜಯ್ ಅವರು ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳಿಗೆ ಕಾರ್ಯಕ್ರಮ ನಡೆಯುವುದಕ್ಕೆ ಸ್ವಲ್ಪ ಅವಕಾಶ ಕೊಡಿ ನಂತರ ನಿಮ್ಮೊಂದಿಗೆ ಮಾತನಾಡುತ್ತೇನೆ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಾತನಾಡುವ ನೆಪದಲ್ಲಿ ವಿದ್ಯಾರ್ಥಿಯಿಂದ ಮೊಬೈಲ್ ಪಡೆದ- ಹಲ್ಲೆ ಮಾಡಿ, ಫೋನ್ ಕದ್ದ

ನಟನ ಮಾತನ್ನು ಕೇಳದ ಫ್ಯಾನ್ಸ್ ‘ಸಲಗ ಸಲಗ..’ ಎಂದು ಕೂಗುತ್ತಿದ್ದರು. ಬಳಿಕ ಬೃಹತ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ದುನಿಯಾ ವಿಜಯ್ ಉದ್ಘಾಟಿಸಿದರು. ಇದನ್ನೂ ಓದಿ:  ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

Share This Article
Leave a Comment

Leave a Reply

Your email address will not be published. Required fields are marked *