ನನಗೆ ಕೊರೊನಾ ನೆಗೆಟಿವ್, ನಾಳೆಯಿಂದ ಕರ್ತವ್ಯಕ್ಕೆ ಹಾಜರ್: ಕೋಟ ಶ್ರೀನಿವಾಸ ಪೂಜಾರಿ

Public TV
1 Min Read

ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

ಸಿಎಂ ಯಡಿಯೂರಪ್ಪ ಅವರಿಗೆ ಆಗಸ್ಟ್ 2 ರಂದು ಕೋವಿಡ್ ಪಾಸಿಟಿವ್ ಬಂದಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 30ರಂದು ಮುಖ್ಯಮಂತ್ರಿ ಅವರೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು ಒಂದು ಗಂಟೆ ಜೊತೆಗಿದ್ದರು. ಈ ಕಾರಣದಿಂದ ಸಚಿವರು ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಸ್ವಯಂ ಗೃಹ ದಿಗ್ಭಂದನಕ್ಕೊಳಗಾಗಿದ್ದರು.

ಕೋವಿಡ್ ಪರೀಕ್ಷೆಯನ್ನು ಕೂಡ ನಡೆಸಿದ್ದು, ಇಂದು ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಸ್ವತಃ ಸಚಿವ ಜೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

“ಮುಖ್ಯಮಂತ್ರಿಗಳ ಸಂಪರ್ಕಕ್ಕೆ ಬಂದಿದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರಂಟೈನ್‍ನಲ್ಲಿದ್ದೆ. ಇದೀಗ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ” ಎಂದು ಸಚಿವರು ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *