ನಾಗರಪಂಚಮಿ- ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ಹೊರ ಬಂದ ಸರ್ಪ

Public TV
1 Min Read

ಮಂಗಳೂರು: ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯ ವಿಶೇಷ ದಿನವಾದ ಇಂದು ಜೀವಂತ ನಾಗರಹಾವು ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದೆ.

ಭಕ್ತರಿಗೆ ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರವೇಶ ನಿಷೇಧವಿದ್ದು ಕ್ಷೇತ್ರದ ಅರ್ಚಕರು ನಾಗರ ಪಂಚಮಿಯ ಹಿನ್ನಲೆಯಲ್ಲಿ ಮೂಲ ದೇವರಿಗೆ ಪಂಚಾಮೃತ ಅಭಿಷೇಕ ಮಾಡಿದ ಬಳಿಕ ನಾಗರಾಜ ಪ್ರತ್ಯಕ್ಷವಾಗಿದೆ. ಗರ್ಭಗುಡಿಯ ಹುತ್ತದಿಂದ ಹೊರಬಂದ ನಾಗರಹಾವು ಕ್ಷೇತ್ರದ ಒಳಾಂಗಣ ಹಾಗೂ ಹೊರಾಂಗಣ ಸುತ್ತಾಡಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದೆ.

ಕ್ಷೇತ್ರದ ಅರ್ಚಕರು ನಾಗರಾಜನಿಗೆ ಹಾಲೆರೆದಿದ್ದು, ಅದನ್ನು ಕುಡಿದ ಬಳಿಕ ಪಕ್ಕದ ಪೆÇದೆಯೊಳಗೆ ಹೋಗಿದೆ. ನಾಗರಪಂಚಮಿಯ ದಿನವೇ ಗರ್ಭಗುಡಿಯಿಂದ ನಾಗರಾಜ ಹೊರಬಂದಿದ್ದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.

ಪ್ರತಿ ವರ್ಷ ನಾಗರಪಂಚಮಿಯ ದಿನದಂದು ಲಕ್ಷಾಂತರ ಮಂದಿ ಕುಕ್ಕೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ನಿಂದಾಗಿ ಕೇವಲ ಬೆರಳೆಣಿಕೆಯ ಭಕ್ತರು ದೇವಸ್ಥಾನದ ಹೊರಗಿನಿಂದಲೇ ನಮಸ್ಕರಿಸಿ ತೆರಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *