ನಾನು ಈಗಲೂ ಜೆಡಿಎಸ್‍ನಲ್ಲೇ ಇದ್ದೀನಿ-ಜಿ. ಟಿ. ದೇವೇಗೌಡ

Public TV
1 Min Read

ಮೈಸೂರು: ನಾನು ಈಗಲೂ ಜೆಡಿಎಸ್ ನಲ್ಲೇ ಇದ್ದೀನಿ. ವಿಧಾನಸಭೆಯಲ್ಲೂ ಜೆಡಿಎಸ್ ಶಾಸಕರ ಜೊತೆಯೇ ಕುಳಿತುಕೊಳ್ಳುತ್ತಿದ್ದೇನೆ. ನಾನು ಯಾವಗೂ ಜೆಡಿಎಸ್ ವಿರುದ್ಧವಾಗಿ ಮಾತನಾಡಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ತೀರುಗೇಟುಕೊಟ್ಟಿದ್ದಾರೆ.

ನಮ್ಮ ಪಕ್ಷದಿಂದ ಬೆಳೆದವರೆ ನಮ್ಮ ಪಕ್ಷ ಮುಗಿಸಲು ಹೊರಟಿದ್ದಾರೆ. ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಜೆಡಿಎಸ್ ಬಾಗಿಲು ಮುಚ್ಚಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದರು. ಈ ಹೇಳಿಕೆ ಸಂಬಂಧ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಟಿಡಿ, ನಾನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ. ನಾನೇನು ಜೆಡಿಎಸ್ ವಿರುದ್ಧ ಕೆಲಸ ಮಾಡುತ್ತಿಲ್ಲ. ಮೈಸೂರಿನ ಹೈಕಮಾಂಡ್ ಮಾತು ಕೇಳಿಕೊಂಡು ಕುಮಾರಸ್ವಾಮಿಯವರು ಈ ರೀತಿ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ

ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿಯವರು ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಮೈಮುಲ್ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಮೈಮುಲ್ ಚುನಾವಣೆಯಲ್ಲಿ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗಳ ವಿರುದ್ಧವಾಗಿ ಪ್ರಚಾರ ಮಾಡುತ್ತಿದ್ದಾರೆ. ಮೈಸೂರಿನ ಹೈಕಮಾಂಡ್ ಮಾತು ಕೇಳಿಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಸಾ. ರಾ. ಮಹೇಶ್ ವಿರುದ್ಧ ಹರಿಹಾಯ್ದಿದ್ದಾರೆ.

ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟೇಶ್ ಬೆಂಬಲಿಗರಿಗೆ ಜೆಡಿಎಸ್ ನವರೇ ಅನುಕೂಲ ಮಾಡಿಕೊಡುತ್ತಿದ್ದಾರೆ. ಜೆಡಿಎಸ್ ಶಾಸಕ ಮಹದೇವ್ ಪುತ್ರನ ವಿರುದ್ಧವಾಗಿ ಜೆಡಿಎಸ್ ನವರು ಕೆಲಸ ಮಾಡುತ್ತಿದ್ದಾರೆ. ಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ಸರ್ವ ನಾಶವಾಯಿತು. ರಾಮಾಯಣದಲ್ಲಿ ಮಂಥರೆಯ ಮಾತು ಕೈಕೇಯಿ ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಯಿತು. ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ, ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಹೇಳಿ ವ್ಯಂಗ್ಯಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *