ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗೋಲ್ಲ – ಉಲ್ಟಾ ಹೊಡೆದ ಶ್ರೀನಿವಾಸ್

Public TV
1 Min Read

ತುಮಕೂರು: ಜೆಡಿಎಸ್ ಪಕ್ಷಕ್ಕೆ ಬಹುಮತ ಬರುವುದಿಲ್ಲ. ನಮ್ಮ ನಾಯಕರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಇದೀಗ ತಾವು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಗುಬ್ಬಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿಯೂ ಬಾಯಿ ತಪ್ಪಿ ಕಾಂಗ್ರೆಸ್‍ಗೆ ಹೋಗುತ್ತೇನೆ ಎಂದು ಹೇಳಿಲ್ಲ. ಆದರೂ ಯಾಕೆ ಈ ವಿಚಾರ ಚರ್ಚೆ ಆಗುತ್ತಿದೆ ಎಂದು ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗೆ ಜೆಡಿಎಸ್ ಪಕ್ಷದ ವಿರುದ್ಧವೇ ನಿರಂತರವಾಗಿ ಹೇಳಿಕೆ ಕೊಡುತ್ತಿದ್ದ ಶ್ರೀನಿವಾಸ್, ಕಾಂಗ್ರೆಸ್ ನಾಯಕರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ ಈ ಅವಧಿಯಲ್ಲಿ ನಾನು ಜೆಡಿಎಸ್ ನಲ್ಲೇ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೋದರೂ ಹೋಗಬಹುದು ಎಂದು ಹೇಳಿಕೆ ಕೊಟ್ಟಿದ್ದರು. ಆದರೀಗ ತಾವು ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: KRS ಬಿರುಕು ಬಿಟ್ಟಿಲ್ಲ, ಸುಮಲತಾ, ಕುಮಾರಸ್ವಾಮಿಯವರದ್ದು ಬೇರೆನೋ ಅಜೆಂಡಾ ಇದೆ: ಆರ್.ಅಶೋಕ್

 

Share This Article
Leave a Comment

Leave a Reply

Your email address will not be published. Required fields are marked *