ನಿಲ್ಲಿಸದೇ ಇದ್ರೆ ಗಾಡಿ ಒಳಗಡೆ ಮೂತ್ರ ಮಾಡ್ತೀನಿ – ಗ್ಯಾಂಗ್ ರೇಪ್ ಆರೋಪಿಗೆ ಗುಂಡೇಟು

Public TV
2 Min Read

– ಮೂತ್ರ ವಿಸರ್ಜನೆಯ ನೆಪ ಹೇಳಿ ಪರಾರಿಗೆ ಯತ್ನ
– ಇಲ್ಲಿಯವರೆಗೆ 10 ಮಂದಿ ಅರೆಸ್ಟ್

ಬೆಂಗಳೂರು: ಬಾಂಗ್ಲಾ ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಶೂಬೂಜ್ ಎಂಬಾತನ ಕಾಲಿಗೆ ಕೆಆರ್ ಪುರಂ ಬಳಿಯ ರಾಂಪುರ ಕೆರೆ ಬಳಿ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಶೂಬೂಜ್ ಯುವತಿಯ ಗುಪ್ತಾಂಗಕ್ಕೆ ಕಾಲಲ್ಲಿ ಒದ್ದು, ವಿಕೃತಿ ಮೆರೆದಿದ್ದ.

ಸಿಕ್ಕಿಬಿದ್ದಿದ್ದು ಹೇಗೆ?
ಆರೋಪಿ ಶೂಬೂಜ್ ಪೇಪರ್ ಆಯುವವರ ಶೆಡ್ ನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕರೆ ತರುತ್ತಿದ್ದರು.

ಈ ವೇಳೆ ಮೂತ್ರ ಬರುತ್ತಿದೆ ಎಂದು ಕಥೆ ಕಟ್ಟಿದ್ದ. ಒಂದು ವೇಳೆ ನಿಲ್ಲಿಸದೇ ಇದ್ದರೆ ಜೀಪ್ ಒಳಗಡೆಯೇ ಮೂತ್ರ ಮಾಡುತ್ತೇನೆ ಎಂದು ಪೊಲೀಸರಿಗೆ ಧಮ್ಕಿ ಹಾಕಿದ್ದ. ಜೀಪಿನಿಂದ ಕೆಳಗಡೆ ಇಳಿಸಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇದನ್ನೂ ಓದಿ: ಗ್ಯಾಂಗ್ ರೇಪ್ ಪ್ರಕರಣ – ಟಿಕ್‍ಟಾಕ್ ಸ್ಟಾರ್‌ನಿಂದ ಬೆಂಗಳೂರಿಗೆ ಯುವತಿಯರ ಸಪ್ಲೈ..!

ಆತನನ್ನು ಹಿಡಿಯಲು ಹಿಂದೆ ಹೋದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಹೆಡ್ ಕಾನ್ಸ್ ಟೇಬಲ್ ದೇವೇಂದರ್ ನಾಯಕ್ ಮತ್ತು ಸಬ್ ಇನ್ಸ್ ಪೆಕ್ಟರ್ ಶಿವರಾಜ್ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ದೇವೇಂದರ್ ನಾಯಕ್ ಬಲಗೈಗೆ ಮತ್ತು ಶಿವರಾಜ್ ಎಡಗೈಗೆ ಗಾಯ ಮಾಡಿದ್ದಾನೆ.

ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಪಿಎಸ್‍ಐ ಶಿವರಾಜ್ ಶರಣಾಗುವಂತೆ ಸೂಚಿಸಿದ್ದಾರೆ. ಸೂಚನೆಯನ್ನು ಧಿಕ್ಕರಿಸಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

10 ಮಂದಿ ಅರೆಸ್ಟ್:
ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಇಲ್ಲಿಯವರೆಗೆ ಒಟ್ಟು 10 ಜನ ಆರೋಪಿಗಳ ಬಂಧನವಾಗಿದೆ. ಮೇ 27 ರಂದು 6 ಜನ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ರಿದಯ್ ಬಾಬು, ರಕಿಬುಲ್ ಇಸ್ಲಾಂ, ಸಾಗರ್, ಮೊಹಮ್ಮದ್ ಬಾಬು ಶೇಕ್, ಅಕಿಲ್, ಇಬ್ಬರು ಮಹಿಳಾ ಆರೋಪಿಗಳಾದ ಕಾಜಲ್, ನಸ್ರತ್ ಅವರನ್ನು ಬಂಧಿಸಲಾಗಿತ್ತು. ಇವರ ಮಾಹಿತಿ ಮೇರೆಗೆ ನಿನ್ನೆ ರಫ್ಸನ್, ರಫ್ಸನ್ ಪತ್ನಿ ತಾನ್ಯಾ ಮತ್ತು ದಾಲೀಮ್ ಬಂಧನ ಮಾಡಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *