ನಿಸರ್ಗ ಚಂಡಮಾರುತ- ಕಡಲ ತೀರಕ್ಕೆ ಮೀನುಗಾರಿಕಾ ಸಚಿವ ಭೇಟಿ

Public TV
1 Min Read

ಮಂಗಳೂರು: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಯಾವ ಯಾವ ಕಾರ್ಯ ರೂಪಿಸಬೇಕು ಎಂಬುದರ ಕುರಿತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಸ್ವಾಭಾವಿಕವಾಗಿ ಕಡಲ್ಕೊರೆತದಿಂದಾಗಿ ಮೀನುಗಾರರಿಗೆ, ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆದ ಹಿನ್ನೆಲೆಯಲ್ಲಿ ತುರ್ತಾಗಿ ತಡೆಗೋಡೆ ಮಾಡಬೇಕಾದ ಅಗತ್ಯವಿದೆ. ರೂ. 230 ಕೋಟಿ ಅನುದಾನದಲ್ಲಿ ಕಾಮಗಾರಿಯು ಪ್ರಗತಿಯಲ್ಲಿದೆ ತಿಳಿಸಿದರು.

ಈಗಾಗಲೇ ಮುಂಜಾಗ್ರತಾ ಕ್ರಮವಾಗಿ 25 ಮಂದಿ ಸಿಬ್ಬಂದಿಯ ಓಆಖಈ ಟೀಂ ಮಂಗಳೂರಿಗೆ ಭೇಟಿ ನೀಡಿದ್ದು ಅನಾಹುತ ಎದುರಿಸಲು ಜಿಲ್ಲಾಡಳಿತಕ್ಕೆ ಸಹಾಯ ಮಾಡಲಿದೆ.

Share This Article
Leave a Comment

Leave a Reply

Your email address will not be published. Required fields are marked *