ನೀರಲ್ಲಿ ಮುಳುಗಿ 2 ಮಕ್ಕಳು ಸೇರಿ ಮೂವರು ಸಾವು – ಮತ್ತೋರ್ವನಿಗಾಗಿ ಶೋಧ

By
1 Min Read

ರಾಯಚೂರು: ಜಿಲ್ಲೆಗೆ ಇಂದು ಕರಾಳ ಭಾನುವಾರವಾಗಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ನೀರಿನಲ್ಲಿ ಮುಳುಗಿ ಮೂರು ಜನ ಸಾವನ್ನಪ್ಪಿದರೆ ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ.

ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಪಾರ್ವತಿ (30), ಅರ್ಜುನ (9), ಪಾರ್ವತಿ ಅಕ್ಕನ ಮಗಳು ಶಿಲ್ಪಾ (10) ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಸಿ ಶವಗಳನ್ನು ಹೊರತೆಗೆದಿವೆ. ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಠಾಣೆ ಪಿಎಸ್‍ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತೊಂದೆಡೆ ತುಂಗಭದ್ರಾ ನದಿಯಲ್ಲಿ ಯುವಕ ನಾಪತ್ತೆಯಾದ ಘಟನೆ ನಡೆದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಹರನಹಳ್ಳಿ ಬಳಿಯ ಶಾಸ್ತ್ರಿ ಕ್ಯಾಂಪಿನ ಸಂದೀಪ್ ಕುಮಾರ್ (24) ಎಂಬಾತ ನಾಪತ್ತೆಯಾಗಿದ್ದಾನೆ. ಯುವಕನ ಬಟ್ಟೆ ಮತ್ತು ಚಪ್ಪಲಿ ನದಿ ದಂಡೆಯಲ್ಲೇ ಇದ್ದು, ಯುವಕನಿಗಾಗಿ ಸ್ಥಳೀಯರು ನದಿ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆಯಿಂದ ಮಾನ್ವಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.

Share This Article
Leave a Comment

Leave a Reply

Your email address will not be published. Required fields are marked *