ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು

Public TV
1 Min Read

– ಮಹಿಳೆ ಸಾವಿನ ನಂತರ ಪತಿ, ಮಾವ ಪರಾರಿ

ಹಾಸನ: ಕೌಟುಂಬಿಕ ಕಲಹದಿಂದ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ, ಪುಟ್ಟನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯನ್ನು ಸಾಕಮ್ಮ(24) ಎಂದು ಗುರುತಿಸಲಾಗಿದೆ. 2 ವರ್ಷಗಳ ಹಿಂದೆ ಮದುವೆಯಾಗಿದ್ದ ಸಾಕಮ್ಮನಿಗೆ ಗಂಡ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಕೌಟುಂಬಿಕ ಕಲಹದಿಂದ ಮನನೊಂದು ಸಾಕಮ್ಮ ನೇಣಿಗೆ ಶರಣಾಗಿದ್ದಾಳೆ.

ಇತ್ತ ಸಾಕಮ್ಮ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಗಂಡ ಪ್ರವೀಣ್ ಮತ್ತು ಮಾವ ರಂಗಸ್ವಾಮಿ ನಾಪತ್ತೆಯಾಗಿದ್ದಾರೆ. ಸಾಕಮ್ಮನ ಮೃತದೇಹವನ್ನು ಪೋಷಕರು ಗಂಡನ ಮನೆಯ ಮುಂದೆ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *