ನೈಟ್ ಕರ್ಫ್ಯೂ ಮೇಲ್ನೋಟಕ್ಕೆ, ನಾವು ನಿರ್ಬಂಧಿಸಿರುವುದು ನೈಟ್ ಲೈಫ್: ಅರವಿಂದ ಲಿಂಬಾವಳಿ

Public TV
1 Min Read

ಚಾಮರಾಜನಗರ: ನೈಟ್ ಕರ್ಫ್ಯೂ ಜಾರಿಗೆ ತಂದಿರುವುದು ಮೇಲ್ನೋಟಕ್ಕೆ ಆದರೆ ನಾವೂ ನೈಟ್‍ಲೈಫ್‍ನ್ನು ನಿರ್ಬಂಧ ಮಾಡಿದ್ದೇವೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ರಾಜ್ಯದಲ್ಲಿ ನೈಟ್ ಕರ್ಫ್ಯೂ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಅರವಿಂದ ಲಿಂಬಾವಳಿ ಅವರು, ನೈಟ್ ಕರ್ಫ್ಯೂ ಕುರಿತು ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಜನರ ರಕ್ಷಣೆ ಮಾಡುವ ಹೊಣೆ ಸರ್ಕಾರದ್ದಾಗಿದೆ. ವಿರೋಧ ಪಕ್ಷದವರಿಗೆ ಸಹಕಾರ ಕೊಡುವಂತೆ ನಾವು ಮನವಿ ಮಾಡುತ್ತೇವೆ. ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ ಹೇಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಕೂಡ ಸರ್ಕಾರ ಹಾಗೂ ವಿರೋಧ ಪಕ್ಷ ಇದೆ. ಅವರು ಯಾವ ರೀತಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ ನೋಡಿ ಎಂದರು.

ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳುವ ಕ್ರಮಕ್ಕೆ ಬೆಂಬಲ ಸೂಚಿಸಿ. ನೈಟ್ ಕರ್ಫ್ಯೂ ಅನ್ನೋದು ನಿಮಗೆ ಮೇಲ್ನೋಟಕ್ಕೆ ಕಂಡು ಬರುತ್ತದೆ. ಅದರೆ ನೈಟ್‍ಲೈಫ್‍ನ್ನು ನಿರ್ಬಂಧಿಸಿದ್ದೇವೆ. ನೇರವಾಗಿ ಹೇಳುವುದಾದರೆ. ಕ್ಲಬ್, ಬಾರ್, ರೆಸ್ಟೋರೆಂಟ್‍ಗಳು ರಾತ್ರಿ ಒಂದು ಗಂಟೆಯ ವರೆಗೆ ಓಪನ್ ಇರುತ್ತದೆ. ಇಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ ಆದ್ದರಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ರಾಜ್ಯದಲ್ಲಿ ಮತ್ತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *