ಪತ್ರಕರ್ತರ ಗ್ರಾಮ ವಾಸ್ತವ್ಯ ಪೂರ್ವ ತಯಾರಿ ಸಭೆ

Public TV
1 Min Read

ಮಂಗಳೂರು: ಸರಕಾರಿ ಕಾರ್ಯಕ್ರಮಗಳನ್ನು ಜನರ ಬಳಿ ತಲುಪಿಸಲು ಅಧಿಕಾರಿಗಳ ಹಾಗೂ ಜನಸಹಭಾಗಿತ್ವದ ಗ್ರಾಮ ವಾಸ್ತವ್ಯ ಮಹತ್ವದ ಕಾರ್ಯಕ್ರಮ ಎಂದು ಪುತ್ತೂರು ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.31 ರಂದು ಕಡಬದ ಕೊಂಬಾರು ಹಿ.ಪ್ರಾ ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದ್ದು ಈ ನಿಟ್ಟಿನಲ್ಲಿ ಪತ್ರಕರ್ತರು ಸ್ವಯಂ ಪ್ರೇರಿತರಾಗಿ ಗ್ರಾಮಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಈಗಾಗಲೇ ಸರಕಾರದ ಕಂದಾಯ ಸಚಿವರು ನೀಡಿದ ಸೂಚನೆಯ ಪ್ರಕಾರ ಪ್ರತಿ ತಿಂಗಳ ಮೂರನೇ ಶನಿವಾರ ಕಂದಾಯ ಇಲಾಖೆಗೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದರಿಂದ ಜನರ ಸಮಸ್ಯೆ ಪರಿಹರಿಸಲು ಸಹಕಾರಿಯಾಗಲಿದೆ ಎಂದು ಡಾ.ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಹಶೀಲ್ದಾರ್ ಅನಂತ ಶಂಕರ,ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಗೆ,ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ ಬಿ.ಎನ್, ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ಎನ್.ಕೆ, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ, ಮೊದಲಾದವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *