ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಉಪವಿಭಾಗಾಧಿಕಾರಿಗಳಿಂದ ಉತ್ನಾಳ್ ತಾಂಡಾ ಎಲ್‍ಟಿ 2 ಗ್ರಾಮಕ್ಕೆ ಭೇಟಿ

Public TV
1 Min Read

ವಿಜಯಪುರ: ಜಿಲ್ಲೆಯ ಉತ್ನಾಳ್ ತಾಂಡಾ ಎಲ್‍ಟಿ 2 ಗ್ರಾಮದಲ್ಲಿ ಕೋವಿಡ್ ಸೋಂಕಿತರಿಗೆ ಸರಿಯಾದ ಔಷಧಿ ವಿತರಣೆ ಆಗುತ್ತಿಲ್ಲ ಎಂಬ ಪಬ್ಲಿಕ್ ಟಿವಿಯ ವಿಸ್ತøತ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿ ಪಿ,ಸುನಿಲ್ ಕುಮಾರ್ ಅವರ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ ಅವರು ಉತ್ನಾಳ್ ತಾಂಡಾ ಎಲ್‍ಟಿ2 ಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿದ ಬಲರಾಮ್ ಲಮಾಣಿ, ಕೊರೊನಾ ಪಾಸಿಟಿವ್ ಬಂದವರು, ಕುಟುಂಬದ ಉಳಿದ ಸದಸ್ಯರಿಂದ ಪ್ರತ್ಯೇಕವಾಗಿ ವಾಸಿಸಲು ಗ್ರಾಮಸ್ಥರಲ್ಲಿ ಮನವರಿಕೆ ಮಾಡಿದರು. ಪ್ರತ್ಯೇಕ ಕೋಣೆ ಇರದೇ ಇದ್ದ ಪಕ್ಷದಲ್ಲಿ ಗ್ರಾಮದಲ್ಲಿರುವ ಶಾಲೆಯಲ್ಲಿ ವಾಸವಾಗುವಂತೆ ಸೂಚನೆ ನೀಡಿದರು.

ವೈದ್ಯರು ನೀಡಿದ ಮಾತ್ರೆಗಳನ್ನು ತಪ್ಪದೇ ಸೇವಿಸುವಂತೆ ಮತ್ತು ಆರೋಗ್ಯದಲ್ಲಿ ಏರುಪೇರು ಆದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವಂತೆ ಸೂಕ್ತ ತಿಳುವಳಿಕೆ ನೀಡಿ, ಗ್ರಾಮಸ್ಥರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಸರಿಯಾದ ಕ್ರಮ ಪಾಲಿಸುವಂತೆ ಮನವಿ ಮಾಡಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *