ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಷಯುಕ್ತ ತ್ಯಾಜ್ಯ ನದಿಗಳಿಗೆ ಹರಿಬಿಡುವ ಕಾರ್ಖಾನೆಗಳ ವಿರುದ್ಧ ಕ್ರಮ

Public TV
1 Min Read

ಯಾದಗಿರಿ: ವಡಗೇರಾ ತಾಲೂಕಿನ ಕೋರ್ ಗ್ರೀನ್ ಶುಗರ್ ಫ್ಯಾಕ್ಟರಿಯಿಂದ ವಿಷಯುಕ್ತ ತ್ಯಾಜ್ಯವನ್ನು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆ, ನದಿಯ ಹಿನ್ನೀರಿನಲ್ಲಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ‘ಪಬ್ಲಿಕ್ ಟಿವಿ ವೆಬ್‌ಸೈಟ್‌’ ನಲ್ಲಿ ಸುದ್ದಿ ಪ್ರಸಾರವಾಗಿತ್ತು. ಸುದ್ದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ವಿಷಯುಕ್ತ ತ್ಯಾಜ್ಯವನ್ನು ನದಿ, ಹಳ್ಳ- ಕೊಳ್ಳಗಳಿಗೆ ಹರಿಬಿಡುವ ಕೆಮಿಕಲ್ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರ ಅಧ್ಯಕ್ಷತೆಯಲ್ಲಿ ಕಡೆಚೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಮತ್ತು ಇತರೆ ಫ್ಯಾಕ್ಟರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, ಮಾಲಿನ್ಯಕಾರಕ ತ್ಯಾಜ್ಯವನ್ನು ಕಾರ್ಖಾನೆಗಳ ಬೇಜವಾಬ್ದಾರಿಯಿಂದ ಕೈಗಾರಿಕಾ ಪ್ರದೇಶದ ಸುತ್ತಲಿನ ನದಿಗಳಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಜನತೆ ತೀವ್ರ ಆತಂಕ ವ್ಯಕ್ತ ಪಡಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸಕ್ಕರೆ ಕಾರ್ಖಾನೆಯ ವಿಷಪೂರಿತ ನೀರು ಕೃಷ್ಣಾ ನದಿ ಹೀನ್ನಿರಿಗೆ- ಲಕ್ಷಾಂತರ ಮೀನುಗಳು ಸಾವು

ಅಲ್ಲದೆ ಕೈಗಾರಿಕಾ ಪ್ರದೇಶದಿಂದ ನದಿ, ಹಳ್ಳ-ಕೊಳ್ಳಗಳಿಗೆ ಹರಿದ ಕಲುಷಿತ ರಾಸಾಯನಿಕವನ್ನು ಜಲಚರ, ಪಶು-ಪಕ್ಷಿಗಳು ಸೇವಿಸಿ ನಾಶವಾಗುತ್ತಿವೆ. ಹೀಗಾಗಿ ಮಾಲಿನ್ಯ ಎಸಗುತ್ತಿರುವ ಟೈರ್ ಘಟಕ, ಶುಗರ್ ಫ್ಯಾಕ್ಟರಿ ವಿರುದ್ಧ ಕೂಡಲೇ ಕಾನೂನು ಪ್ರಕಾರ ಕ್ರಮ ತೆಗೆದುಕೊಂಡು ಘಟಕವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *