ಪಾಸಿಟಿವ್ ಬಂದ ಸಿಬ್ಬಂದಿಯಿಂದಲೇ ಆಸ್ಪತ್ರೆಯಲ್ಲಿ ಕೆಲಸ ಮಾಡಿಸಿದ ವೈದ್ಯ

Public TV
1 Min Read

ಮಡಿಕೇರಿ: ಪ್ರಾಥಮಿಕ ಅರೋಗ್ಯ ಕೇಂದ್ರದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸಿಬ್ಬಂದಿಯನ್ನು ಕರೆಸಿ ಕರ್ತವ್ಯ ಮಾಡಿಸಿ ವೈದ್ಯರೊಬ್ಬರು ಎಡವಟ್ಟು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಿಬ್ಬಂದಿ ಲ್ಯಾಬ್ ಟೆಕ್ನಿಷಿಯನ್‍ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಎಂಟು ದಿನ ಕಳೆದ ಬಳಿಕ ಮತ್ತೆ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಅಗಲೂ ಅವರಿಗೆ ಪಾಸಿಟಿವ್ ಎಂದು ವರದಿ ಬಂದಿದೆ. ಅದ್ರೂ ಅರೋಗ್ಯ ಇಲಾಖೆ ವೈದ್ಯ ಸಿಬ್ಬಂದಿ ಕೊರತೆಯಿಂದ ಲ್ಯಾಬ್ ಟೆಕ್ನಿಷಿಯನ್ ಕರೆಸಿ ಕರ್ತವ್ಯ ಮಾಡುವಂತೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಅಸ್ಪತ್ರೆಯ ಸಿಬ್ಬಂದಿಯಿಂದ ಕೊರೊನಾ ಮಾಹಾಮಾರಿ ಊರಿಗೆ ಹರಡುವ ಸಾಧ್ಯತೆ ಇದೆ. ಕೆಲವು ಜನರಿಗೆ ಸೋಂಕು ಹರಡಿದೆ ಎಂದು ಸಾರ್ವಜನಿಕರು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಅಲ್ಲಿನ ಪಂಚಾಯಿತಿ ಸದಸ್ಯರಿಗೆ ದೂರು ನೀಡಿದ್ದಾರೆ. ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ಪಂಚಾಯಿತಿಯ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಅಸ್ಪತ್ರೆಯ ವೈದ್ಯ ಜೀವನ್ ಅವರ ಬಳಿ ಕೇಳುಲು ಮುಂದಾಗುತ್ತಿದಂತೆ. ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರ ವಿರುದ್ಧವೇ ವೈದ್ಯ ಜೀವನ್ ಕರ್ತವ್ಯ ಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈದ್ಯರ ದೂರು ಪಡೆದ ಠಾಣಾಧಿಕಾರಿ ಪುನೀತ್ ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯರುಗಳನ್ನು ಠಾಣೆಗೆ ಕರೆಸಿ ಪಂಚಾಯಿತಿ ಸದಸ್ಯರ ಜೊತೆ ಅನುಚಿತವಾಗಿ ವರ್ತಿಸಿದ್ದೀರಾ. ಪಂಚಾಯಿತಿ ಸದಸ್ಯರು ಟೆಕ್ನಿಷಿಯನ್ ಹಾಗೂ ವೈದ್ಯರ ವಿರುದ್ದವೇ ದೂರು ನೀಡಲು ಪಂಚಾಯಿತಿ ಅಡಳಿತ ಮಂಡಳಿಯಿಂದ ಮುಂದಾಗಿದ್ದರು. ಆಗ ಠಾಣಾಧಿಕಾರಿ ಪುನೀತ್ ರಾಜಿ ಮಾಡಿಕೊಳ್ಳುವಂತೆ ಹೇಳಿ ಕಳುಹಿಸಿದ್ದಾರೆ. ಸದ್ಯ ಪಾಸಿಟಿವ್ ಬಂದ ಲ್ಯಾಬ್ ಟೆಕ್ನಿಷಿಯನ್ ಸಿಬ್ಬಂದಿಯನ್ನು ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲಾಗಿದೆ ಎಂದು ಪಂಚಾಯತಿ ಪಿಡಿಓ ವೇಣುಗೋಪಾಲ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ವೈದ್ಯರೇ ಈ ರೀತಿ ಎಡವಟ್ಟು ಮಾಡಿ ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *