ಪುತ್ತೂರಿನ ರಾಕೇಶ್ ಕೃಷ್ಣ, ಬೆಂಗ್ಳೂರಿನ ವೀರ್ ಕಶ್ಯಪ್‍ಗೆ ‘ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ

Public TV
1 Min Read

ನವದೆಹಲಿ: ಕರ್ನಾಟಕ ರಾಜ್ಯದ ಇಬ್ಬರು ಮಕ್ಕಳು ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ’ ಪ್ರಶಸ್ತಿಗೆ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕಶ್ಯಪ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಬ್ಬರಿಗೂ ಆವಿಸ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಿದೆ.

ವೀರ್ ಕಶ್ಯಪ್ ಅವರು ಕೊರೊನಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಹಾವು-ಏಣಿ ಮಾದರಿಯ ‘ಕೊರೊನಾ ಯುಗ’ ಎಂಬ ವಿಶಿಷ್ಠ ಆಟ ಕಂಡುಹಿಡಿದಿದ್ದರು.

ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯ ಪದಕ 1 ಲಕ್ಷ ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ 12 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *