ಪುತ್ಥಳಿ ಧ್ವಂಸ ಅವಮಾನವಲ್ಲ, ಆಶೀರ್ವಾದ: ಭಾರತಿ ವಿಷ್ಣುವರ್ಧನ್

Public TV
1 Min Read

ಬೆಂಗಳೂರು: ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡುವವರು ಇರಬೇಕು. ಹಾಗಿದ್ದಲ್ಲಿ ಮಾತ್ರ ಅವರ ಇರುವಿಕೆ ಗೊತ್ತಾಗುತ್ತೆ. ಪುತ್ಥಳಿ ಧ್ವಂಸವನ್ನ ಅವಮಾನ ಅಂದುಕೊಳ್ಳಬಾರದು. ಅದನ್ನ ಆಶೀರ್ವಾದ ಅಂದುಕೊಳ್ಳೋಣ ಎಂದು ಸಾಹಸಿಂಹ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

ಮೈಸೂರಿನಲ್ಲಿ ವಿಷ್ಣು ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಇಡೀ ಚಿತ್ರರಂಗ ಪ್ರತಿಕ್ರಿಯಿಸಿದೆ. ಘಟನೆಗೆ ಪ್ರತಿಕ್ರಿಯಿಸಿದ ಎಲ್ಲರಿಗೂ ಧನ್ಯವಾದವನ್ನು ಹೇಳುತ್ತೇನೆ. ಎಲ್ಲರ ಮನದಲ್ಲಿಯೂ ವಿಷ್ಣು ಇದ್ದಾರೆ ಎಂದರು.

ಯಾರೋ ಕೆಲವರು ಅವರ ಬಗ್ಗೆ ಮಾತನಾಡುತ್ತಾರೆ. ಮಾತನಾಡುವವರು ಇದ್ದಾಗಲೇ ನಮ್ಮವರು ಇದ್ದಾರೆ ಎನಿಸುತ್ತದೆ. ಪುತ್ಥಳಿ ಧ್ವಂಸವನ್ನು ಅವಮಾನ ಅಂದುಕೊಳ್ಳಬಾರದು. ಅದನ್ನು ಆಶೀರ್ವಾದ ಅಂದುಕೊಳ್ಳೋಣ. ಇಂಹತ ಕೆಲಸ ಮಾಡಿದಂತವರಿಗೆ ನಾನು ಏನೂ ಹೇಳುವುದಿಲ್ಲ. ಅಂತವರ ಬಗ್ಗೆ ಏನು ಮಾತನಾಡದೇ ಇರುವುದೇ ಉತ್ತಮ ಎಂದು ಹೇಳಿದ್ದಾರೆ. ಇದನ್ನು ಓದಿ: ಸಿಂಹ ಯಾವತ್ತಿದ್ರೂ ಸಿಂಹವೇ- ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವ್ರ ವಿರುದ್ಧ ಪುತ್ರಿ ಕಿಡಿ

 

ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಸ್ಥಾಪನೆ ಮಾಡಿದ್ದ ದಿವಂಗತ ನಟ ಡಾ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಸಂಬಂಧ ಅಳಿಯ ಅನಿರುದ್ಧ್, ನಟರಾದ ದರ್ಶನ್, ಸುದೀಪ್ ಸೇರಿದಂತೆ ವಿಷ್ಣು ಅಭಿಮಾನಿಗಳು ಕೂಡ ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ್ದರು. ಇದೀಗ ಅದೇ ವೃತ್ತದಲ್ಲಿ ವಿಷ್ಣುದಾದಾನ ಪ್ರತಿಮೆ ಮತ್ತೆ ನಿರ್ಮಾಣವಾಗುತ್ತಿದೆ.

<

/p>

Share This Article
Leave a Comment

Leave a Reply

Your email address will not be published. Required fields are marked *