ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗದಗ್‍ನಲ್ಲಿ ಸ್ಮರಣೋತ್ಸವ

Public TV
1 Min Read

ಗದಗ: ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ನಡೆಸಲಾಯಿತು.

ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ಹುತಾತ್ಮ ಯೋಧರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ಮಾಡುವ ಮೂಲಕ ಸ್ಮರಣೋತ್ಸವ ಆಚರಿಸಿದರು. ಈ ಆಟೋ ರ‍್ಯಾಲಿಗೆ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ ಪಾಟೀಲ್ ವೀರಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದ್ಲಿ ಇತ್ತೀಚಿಗೆ ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ಯೋಧರಿಗೆ ಸನ್ಮಾನಿಸಲಾಯಿತು. ಅವರು ಸಹ ಇಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ನಗರದ ತೋಂಟದಾರ್ಯ ಮಠದಿಂದ ಆರಂಭವಾದ ರ್ಯಾಲಿ, ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಈ ಆಟೋ ರ್ಯಾಲಿ ನಡೆಯಿತು. ಈ ವೇಳೆ ಸಚಿವ ಸಿ.ಸಿ.ಪಾಟೀಲ್, ಶಾಸಕ ಕಳಕಪ್ಪ ಬಂಡಿ, ಎಸ್.ವಿ ಸಂಕನೂರ ಸೇರಿದಂತೆ ಅನೇಕರು ಸ್ಮರಣೋತ್ಸವದಲ್ಲಿ ಭಾಗಿಯಾಗಿದ್ದರು.

ಗದಗ ಆಟೋ ಚಾಲಕ ಸಂಘದಿಂದ ಭಾರತೀಯ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ದಾರಿಯುದ್ದಕ್ಕೂ ಪುಷ್ಪಗಳನ್ನು ಎರಚುವ ಮೂಲಕ ಭಾರತ ಮಾತೆಗೆ ಜೈಘೋಷ ಕೂಗಿದರು.

Share This Article
Leave a Comment

Leave a Reply

Your email address will not be published. Required fields are marked *