ಪೊಲೀಸರಿಗೆ ಕೊರೊನಾ ಆತಂಕ- ಸಿಬ್ಬಂದಿಗೆ ಅಲೋಕ್ ಕುಮಾರ್ ಯೋಗ ಪಾಠ

Public TV
1 Min Read

ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸರಿಗೂ ಹೆಚ್ಚು ವ್ಯಾಪಿಸುತ್ತಿದ್ದು, ಆತಂಕದಿಂದಲೇ ಕೊರೊನಾ ವಾರಿಯರ್ಸ್ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪೊಲೀಸರು ಮಹಾಮಾರಿ ವಿರುದ್ಧ ಹೋರಾಡಲು ಸಹಾಯವಾಗುವಂತೆ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಸಿಬ್ಬಂದಿಗೆ ಯೋಗ, ಪ್ರಾಣಯಾಮದ ಬಗ್ಗೆ ಪಾಠ ಮಾಡಿದ್ದಾರೆ.

ನಾಲ್ಕು ಬೆಟಾಲಿಯನ್ ಕ್ವಾರಂಟೈನ್ ಸೆಂಟರ್ ನಲ್ಲಿ ಅಲೋಕ್ ಕುಮಾರ್ ಯೋಗ ಹೇಳಿಕೊಟ್ಟಿದ್ದು, ಕಪಾಲಬಾತಿ, ಭಸ್ತ್ರಿಕ ಪ್ರಾಣಾಯಾಮ ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಸ್ವತಃ ತಾವೇ ಯೋಗ, ಪ್ರಾಣಾಯಾಮ ಮಾಡಿ ತೋರಿಸುವ ಮೂಲಕ ಸಿಬ್ಬಂದಿ ಕುರಿತು ಕಾಳಜಿ ತೋರಿದ್ದಾರೆ.

ಕ್ವಾರಂಟೈನ್ ಸೆಂಟರ್ ನಲ್ಲಿ ಇರುವವರು ಯಾರೂ ಭಯಪಡಬಾರದು, ಧೈರ್ಯವಾಗಿ ಕೊರಿನಾ ಎದುರಿಸಬೇಕು. ಯಾರೂ ಹೆದರುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಸಾಕು ಎಂದು ಸಿಬ್ಬಂದಿಯಲ್ಲಿ ಆತ್ಮಸ್ಥೈರ್ಯ ತುಂಬಿದ್ದಾರೆ. ಇದೇ ರೀತಿ ಕ್ವಾರಂಟೈನ್ ಸೆಂಟರ್‍ನಲ್ಲಿರುವ ಎಲ್ಲ ಬೆಟಾಲಿಯನ್ ಸಿಬ್ಬಂದಿ ಯೋಗ ಹಾಗೂ ಪ್ರಾಣಾಯಾಮ ಮಾಡುವಂತೆ ಸಲಹೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *