ಪೊಲೀಸರ ಭಯದಿಂದ ಆತ್ಮಹತ್ಯೆಗೆ ಶರಣಾದ ಯುವತಿ

Public TV
1 Min Read

– ಶವ ಪಡೆಯದೇ ಕುಟುಂಬಸ್ಥರಿಂದ ಪ್ರತಿಭಟನೆ

ಗುರುಗ್ರಾಮ: ಪೊಲೀಸರ ಭಯದಿಂದ 22 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಫರೀದಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೋಷಕರು ಮಗಳ ಶವ ಪಡೆಯಲು ಹಿಂದೇಟು ಹಾಕಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಯುವತಿ ರಾಜೇಂದ್ರ ಪಾರ್ಕ್ ನಲ್ಲಿ ಕುಟುಂಬದ ಜೊತೆ ವಾಸವಾಗಿದ್ದಳು. ಯುವತಿ ಕುಟುಂಬ ಪ್ರಕರಣವೊಂದರಲ್ಲಿ ಆರೋಪಿಗಳಾಗಿದ್ದು, ಪೊಲೀಸರು ಎಲ್ಲರನ್ನೂ ವಿಚಾರಣೆಗೆ ನಡೆಸಿದ್ದರು. ಆದ್ರೆ ಪೊಲೀಸರು ಥರ್ಡ್ ಡಿಗ್ರಿ ಟಾರ್ಚರ್ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಯುವತಿ ಮುಂದೆಯೇ ಆಕೆ ಮಾವನನ್ನ ಬೆತ್ತಲೆಗೊಳಿಸಿ ಪೊಲೀಸರು ಥಳಿಸಿದ್ದರು.

ವಿಚಾರಣೆಯಿಂದ ಬಂದ ಮಗಳು ಪೊಲೀಸರ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫರೀದಾಬಾದ್ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. ಈ ಕುಟುಂಬಕ್ಕೆ ವಿಚಾರಣೆ ನೆಪದಲ್ಲಿ ನೀಡುತ್ತಿರುವ ಕಿರುಕುಳದ ಬಗ್ಗೆ ವರದಿ ಮಾಡಲು ಬಂದ ಪತ್ರಕರ್ತನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *