ಪ್ರಕೃತಿ ಜೀವನ ಕಲಿಸಿದ ಸುಂದರ ಪಾಠ: ಸುದೀಪ್

Public TV
1 Min Read

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಪ್ರತಿದಿನವನ್ನು ನೀವು ಕಾಣುತ್ತಿದ್ದೀರಾ ಎಂದರೇ ಅದು ಆಶೀರ್ವಾದ. ಪ್ರತಿಕ್ಷಣ ನೀವು ಖುಷಿಯಾಗಿರುತ್ತೀರಾ ಎಂದರೆ ಅದು ನಿಮಗೆ ಸಿಕ್ಕ ದೊಡ್ಡ ಉಡುಗೊರೆ ಎನ್ನುವ ಮೂಲಕ ಪ್ರಸ್ತುಕ ಸ್ಥಿತಿಯ ಬಗ್ಗೆ ನಟ ಕಿಚ್ಚ ಸುದೀಪ್ ಎರಡೇ ಅಕ್ಷರದಲ್ಲಿ ಬದುಕಿನ ಸತ್ಯವನ್ನು ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿ ಎಲ್ಲರಲ್ಲೂ ಒಂದು ರೀತಿಯ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದಿನವನ್ನು ಸಂತೋಷದಿಂದ ಕಳೆಯಬೇಕು. ಪ್ರಕೃತಿ ಮತ್ತು ಜೀವನವನ್ನು ಯಾರು ಕೂಡ ನಿಯಂತ್ರಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿಚಾರಿಸಲು ಸಂದೇಶ ಅಥವಾ ಕರೆ ಬರುತ್ತಿದ್ದರೇ ಅದು ಅವರಿಗೆ ನಿಮ್ಮ ಬಗ್ಗೆ ಇರುವ ಕಾಳಜಿ ಎನ್ನುವ ಮೂಲಕ ಆ ಕಾಳಜಿಯನ್ನು ಕಾಪಾಡಿಕೊಳ್ಳಿ ಎಂದು ಬಾದಾಷಾ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಜೀವನದ ಪಾಠವನ್ನು ಮಾಡಿದ್ದಾರೆ.

 

View this post on Instagram

 

A post shared by KicchaSudeepa (@kichchasudeepa)

ಇತ್ತೀಚೆಗಷ್ಟೇ ಅನಾರೋಗ್ಯಕ್ಕೆ ನಟ ಕಿಚ್ಚ ಸುದೀಪ್ ಒಳಗಾಗಿದ್ದರು. ಆರೋಗ್ಯ ಸರಿಯಿಲ್ಲದ ಕಾರಣ ಬಿಗ್‍ಬಾಸ್‍ನ ವಾರಾಂತ್ಯ ಕಾರ್ಯಕ್ರಮದಲ್ಲಿಯೂ ಹಲವು ವಾರಗಳಿಂದ ಭಾಗಿಯಾಗಿಲ್ಲ. ಈ ವಾರಾಂತ್ಯದಲ್ಲೂ ಕೂಡ ನಟ ಕಿಚ್ಚ ಸುದೀಪ್ ಬಿಗ್‍ಬಾಸ್ ನಡೆಸಿಕೊಡುವುದು ಬಹುತೇಕ ಅನುಮಾನವಾಗಿದೆ. ಕಿಚ್ಚ ಸುದೀಪ್‍ಗಾಗಿ ವಾರವೀಡಿ ಕಾಯುತ್ತಿದ್ದ ಬಿಗ್‍ಬಾಸ್ ಸ್ಪರ್ಧಿಗಳು ಮತ್ತು ಅಭಿಮಾನಿಗಳಿಗೆ ಇದರಿಂದ ಭಾರೀ ಬೇಸರ ಉಂಟಾಗಿದೆ. ಕಿಚ್ಚಾ ಆದಷ್ಟು ಬೇಗ ಹುಷಾರಾಗಿ ಬರಲಿ ಎನ್ನುವುದು ಅಭಿಮಾನಿಗಳ ಆಶಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *