ಪ್ರತಿ ತಾಲೂಕಿನಲ್ಲಿ ಮುಜರಾಯಿ ಅರ್ಚಕರಿಗೆ ಪಡಿತರ ವಿತರಣೆ: ಜೆ. ಮಂಜುನಾಥ್

Public TV
1 Min Read

ಬೆಂಗಳೂರು: ಕೋವಿಡ್ ಲಾಕ್‍ಡೌನ್ ನಿರ್ಬಂಧಗಳಿಂದಾಗಿ ಮುಜರಾಯಿ ಇಲಾಖೆ ಸೇರಿದ ದೇವಾಲಯಗಳಿಗೆ ಪೂಜಾ ಕೈಂಕರ್ಯಗಳನ್ನು ನಡೆಸುತ್ತಿದ್ದ ಅರ್ಚಕರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಜಿಲ್ಲಾಡಳಿತದಿಂದ ಪ್ರತಿ ತಾಲೂಕಿನಲ್ಲಿ ಅರ್ಚಕ ಕುಟುಂಬದವರಿಗೆ ಆಹಾರ ಧಾನ್ಯಗಳ ಪಡಿತರ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ತಿಳಿಸಿದರು

ಬೆಂಗಳೂರು ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರ ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ಪಡಿತರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಅರ್ಚಕರನ್ನು ಉದ್ದೇಶಿಸಿ ಮಾತನಾಡಿದರು.

ಮುಜರಾಯಿ ಇಲಾಖೆಗೆ ಸೇರಿದ 82 ಮಂದಿ ಅರ್ಚಕರಿಗೆ ಪಡಿತರ ಕಿಟ್ ಗಳನ್ನು ಜಿಲ್ಲಾಧಿಕಾರಿಗಳು ವಿತರಿಸಿದರು. ಕೊರೊನಾ ಸಾಂಕ್ರಾಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಯಲ್ಲೇ ಇದ್ದು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವುದರ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಂಗನಾಥ್, ತಹಶೀಲ್ದಾರ್ ನರಸಿಂಹಮೂರ್ತಿ, ಉಪ ತಹಶೀಲ್ದಾರ್ ಆದ ಅಶೋಕ್, ನಿರೀಕ್ಷಕರಾದ ಬಾಲಮುರಳಿಕೃಷ್ಣ, ಆಡಳಿತಾಧಿಕಾರಿ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *