ಪ್ರೇಮ ವೈಫಲ್ಯ ಶಂಕೆ- ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಉಪನ್ಯಾಸಕ ಆತ್ಮಹತ್ಯೆ

Public TV
1 Min Read

ಚಿಕ್ಕಬಳ್ಳಾಪುರ: ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ಗ್ರಾಮದ 30 ವರ್ಷದ ಮುರುಳಿ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡ್ತಿದ್ದ ಮುರುಳಿ, ಪಕ್ಕದ ಗ್ರಾಮದ ಯುವತಿಯನ್ನ ಪ್ರೀತಸುತ್ತಿದ್ದರು ಎನ್ನಲಾಗಿದೆ. ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ ಗಲಾಟೆ ಮಾಡಿದ್ರು ಎನ್ನಲಾಗಿದೆ. ಹೀಗಾಗಿ ಇದೇ ವಿಚಾರಕ್ಕೆ ಮನನೊಂದು ಮುರುಳಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಯುವಕನ ಜೇಬಿನಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ದಿಬ್ಬೂರಹಳ್ಳಿ ಪೊಲೀಸರು ಮೃತದೇಹ ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *