ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೃಷ್ಣ ಬಾಜಪೇಯಿ ಕರೆ

Public TV
1 Min Read

ಹುಬ್ಬಳ್ಳಿ: ನಗರ ಸಾರಿಗೆ ವಿಭಾಗದ ಬಿ.ಆರ್.ಟಿ.ಎಸ್ ಹುಬ್ಬಳ್ಳಿ ಘಟಕದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸಂಸ್ಥೆಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್, ಹಾಗೂ ಸೋಪ್ ವಿತರಣಾ ಕಾರ್ಯಕ್ರಮವನ್ನು ಇಂಡಿಯನ್ ರೆಡ್ ಕ್ರಾಸ್ ಸಹಯೋಗದಲ್ಲಿಂದು ಹಮ್ಮಿಕೊಳ್ಳಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಕೊರೊನಾ ಸಂಕಷ್ಟದ ಸಮಯದಲ್ಲಿ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿಗಳು ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವುದನ್ನು ಅಭಿನಂದಿಸಿದರು.

ಪ್ರಯಾಣಿಕರೊಂದಿಗೆ ಪ್ರತಿನಿತ್ಯ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಿ ಸುರಕ್ಷತಾ ನಿಯಮಗಳನ್ನು ಪಾಲಿಸಿ ಸುರಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಸಂಸ್ಥೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಗುಣಮುಖರಾದವರು ಇತರೆ ಕೊರೊನಾ ಪಿಡಿತ ಸಂಧಿಗ್ದ ಪರಿಸ್ಥಿತಿಯಲ್ಲಿರುವಂತಹ ರೋಗಿಗಳಿಗೆ ಪ್ಲಾಸ್ಮಾ ದಾನವನ್ನು ಮಾಡಿ ಜೀವವನ್ನು ಉಳಿಸಲು ಸಹಾಯ ಮಾಡಲು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *