ಬಂಟ್ವಾಳದ ಹಲವು ಪ್ರದೇಶಗಳು ಜಲಾವೃತ

Public TV
1 Min Read

-ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬಂಟ್ವಾಳದ ಅಜ್ಜಿಬೆಟ್ಟು ಗ್ರಾಮದ ದಂಬೆದಾರ್ ಜಯ ಶೆಟ್ಟಿ ಎಂಬವರ ತೋಟಕ್ಕೆ ನೀರು ನುಗ್ಗಿ ಅಡಿಕೆ ಮರಗಳಿಗೆ ಹಾನಿಯಾಗಿದೆ.

ನೇತ್ರಾವತಿ ನದಿಯ ತಡೆಗೋಡೆ ಕುಸಿದು ತೋಟಕ್ಕೆ ನೀರು ನುಗ್ಗಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು.ಹಾನಿಯಾದ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ಸೂಕ್ತ ಪರಿಹಾರ ಕ್ಲಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ತುಂಗಪ್ಪ ಬಂಗೇರಾ, ತಹಶೀಲ್ದಾರರಾದ ರಶ್ಮಿ ಎಸ್.ಆರ್ ,ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿ ಡೊಂಬಯ ಅರಳ,ಪ್ರಮುಖರಾದ ಗಣೇಶ್ ರೈ, ಪುರುಷೋತ್ತಮ ಶೆಟ್ಟಿ ವಾಮದಪದವು, ದಿನೇಶ್ ದಂಬೆದಾರ್, ವಿಜಯ ರೈ,ಗೋಪಾಲಕೃಷ್ಣ ಚೌಟ, ಶ್ಯಾಮ್ ಪ್ರಸಾದ್ ಪೂಂಜಾ, ರವಿರಾಮ ಕಂಚಾರು, ಜಗದೀಶ್ ಉಳಗುಡ್ಡೆ, ವಿಶ್ವನಾಥ, ಗ್ರಾಮ ಕರಣಿಕರರಾದ ಸ್ವಾತಿ, ಕಂದಾಯ ನಿರೀಕ್ಷಕ ನವೀನ್, ನಾಗೇಶ್ ಶೆಟ್ಟಿ, ದೇವಿಪ್ರಸಾದ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *