ಬಂದ್ ಹೊತ್ತಲ್ಲೇ ಅರಮನೆ ಮುಂಭಾಗ ಪ್ರಿ ವೆಡ್ಡಿಂಗ್ ಫೋಟೋಶೂಟ್!

Public TV
1 Min Read

ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೆ ಇತ್ತ ನವ ಜೋಡಿಗಳಿಂದ ಪ್ರಿ ವೆಡ್ಡಿಂಗ್ ಫೋಟೋಶೂಟ್ ನಡೆದಿದೆ.

ಹೌದು. ನಗರದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ಯೆ ಮೂರಕ್ಕೂ ಹೆಚ್ಚು ನವಜೋಡಿಗಳು ಅರಮನೆ ಮುಂಭಾಗ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ನವಜೋಡಿಗಳು ಬಂದ್ ಮರೆತು ಫೋಟೋಶೂಟ್ ನಲ್ಲಿ ಮಗ್ನರಾಗಿದ್ದಾರೆ. ಕುದುರೆ ಸಾರೋಟ್ ನಲ್ಲಿ ಜೋಡಿಗಳ ಫೋಟೋಶೂಟ್ ನಡೆದಿದೆ.

ಇತ್ತ ಮೈಸೂರಿನ ನಗರ ಬಸ್ ನಿಲ್ದಾದ ಬಳಿ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರ‍್ಯಾಲಿ ಮಾರ್ಗ ಬದಲಿಸಿ ಸಾಗಿದ ಕಾರ್ಯಕರ್ತರು, ಬಸ್ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆಯಲು ಮುಂದಾಗಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಮಲಗಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *