ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ದ ಒಂಟೆಗಳ ರಕ್ಷಣೆ

Public TV
1 Min Read

ಕೋಲಾರ: ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತರಲಾಗಿದ್ದ ಎರಡು ಒಂಟೆಗಳ ರಕ್ಷಣೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬಾಲಕೃಷ್ಣ ಬಡಾವಣೆಯಲ್ಲಿ ನಡೆದಿದೆ.

ಫಾಸಿಲ್ ಎಂಬಾತನಿಗೆ ಸೇರಿದ ಎರಡು ಒಂಟೆಗಳನ್ನು ಮದೀನ ಮಸೀದಿಯಲ್ಲಿ ಇರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಒಂಟೆಗಳನ್ನು ರಕ್ಷಿಸಿ, ಮಾಲೂರಿನ ಗೋ ಶಾಲೆಗೆ ರವಾನೆ ಮಾಡಿದೆ. ಬಕ್ರೀದ್ ಹಬ್ಬದಲ್ಲಿ ಒಂಟೆ ಮಾಂಸ ದಾನ ಮಾಡುವುದು ಬಕ್ರೀದ್ ಹಬ್ಬದ ಪ್ರತೀತಿ. ಆದ್ರೆ ಈ ಬಾರಿ ಜಿಲ್ಲಾಡಳಿತ ಒಂಟೆ, ಹಸು ಬಲಿ ಕೊಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.

ಈ ಹಿನ್ನೆಲೆ ಮಸೀದಿಯಲ್ಲಿದ್ದ ಒಂಟೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *